ಬೆಳ್ತಂಗಡಿ: ಕಳಿಯ ಗ್ರಾಮದ ಗೇರುಕಟ್ಟೆ ಪಲ್ಲಿದಳಿಕೆ ನಿವಾಸಿ, ಅರಣ್ಯ ವೀಕ್ಷಕ ಬಾಲಕೃಷ್ಣ ಗೌಡ (40) ನೇಣು ಹಾಕಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಎರಡು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಗುರುವಾರ ಬೆಳಿಗ್ಗೆ ಮನೆಯ ಪಕ್ಕದ ಗುಡ್ಡ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದೆ.