ಕದ್ರಿಯ ವಿಶ್ವಶ್ರೀಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಂದೇ ಒಂದು ಗೋ ವಧೆಯಾಗಲೀ, ಅಕ್ರಮ ಗೋ ಸಾಗಣೆಯಾಗಲಿ ಜಿಲ್ಲೆಯಲ್ಲಿ ನಡೆಯದಂತೆ ಕಡಿವಾಣ ಹಾಕಬೇಕು. ಇಲ್ಲದಿದ್ದಲ್ಲಿ ಬಜರಂಗದಳವು ಗೋರಕ್ಷಣೆಗಾಗಿ ರಸ್ತೆಗೆ ಇಳಿಯಲಿದ್ದು, ಅಕ್ರಮವನ್ನು ತಡೆಯಲಿದೆ. ಮುಂದೆ ಆಗುವ ಅನಾಹುತಗಳಿಗೆ ಜಿಲ್ಲಾಡಳಿತವೇ ಹೊಣೆ’ ಎಂದು ಎಚ್ಚರಿಸಿದರು.