<p><strong>ಮಂಗಳೂರು: </strong>ಕರಾವಳಿಯ ಉದ್ಯಮಿಗಳು, ವ್ಯಾಪಾರಿಗಳು ಇಲ್ಲಿನ ಮೂಲಸೌಕರ್ಯಗಳಾದ ಎನ್ಎಂಪಿಟಿ, ಮಂಗಳೂರು ವಿಮಾನ ನಿಲ್ದಾಣದಂತಹ ಸೌಲಭ್ಯಗಳ ಸಮರ್ಪಕ ಬಳಕೆ ಮಾಡಿಕೊಂಡು, ಈ ಭಾಗದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ರೈಲ್ವೆ ಎಡಿಜಿಪಿ ಭಾಸ್ಕರ್ ರಾವ್ ಹೇಳಿದರು.</p>.<p>ಕೆನರಾ ವಾಣಿಜ್ಯೋದ್ಯಮ ಸಂಸ್ಥೆ ವತಿಯಿಂದ ನಗರದ ಹೋಟೆಲ್ ಓಷಿಯನ್ ಪರ್ಲ್ನಲ್ಲಿ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.</p>.<p>ನಗರದಲ್ಲಿ ಐಟಿ ಪಾರ್ಕ್ ಆರಂಭಿಸುವ ನಿಟ್ಟಿನಲ್ಲಿ ಕೆನರಾ ವಾಣಿಜ್ಯೋದ್ಯಮ ಸಂಸ್ಥೆ ವಹಿಸಿರುವ ಶ್ರಮ ಶ್ಲಾಘನೀಯ. ಮಂಗಳೂರು ಸೇರಿದಂತೆ ಕಾರವಾರದವರೆಗೆ ಕರಾವಳಿಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಬೇಕು ಎಂದು ಸಲಹೆ ನೀಡಿದರು.</p>.<p>ಕೆನರಾ ವಾಣಿಜ್ಯೋದ್ಯಮ ಸಂಸ್ಥೆ, ಈ ಭಾಗದ ಹಾಗೂ ದೇಶದ ಅಭಿವೃದ್ಧಿಗೆ ಮಾದರಿ ವ್ಯಕ್ತಿಗಳನ್ನು ರೂಪಿಸಬೇಕು ಎಂದರು.</p>.<p>1920 ರಲ್ಲಿ ಕಂಡುಬಂದ ಸಾಂಕ್ರಾಮಿಕದಿಂದ ಜನರ ಜೀವನದಲ್ಲಿ ಅಮೂಲಾಗ್ರ ಬದಲಾವಣೆ ಆಯಿತು. ಅದೇ ರೀತಿ ಸದ್ಯದ ಕೋವಿಡ್–19 ಪಿಡುಗಿನಿಂದ ಸ್ವಚ್ಛತೆ ಸೇರಿದಂತೆ ಸಾಕಷ್ಟು ಕಲಿತಿದ್ದು, ಇಂತಹ ಧನಾತ್ಮಕ ಅಂಶಗಳನ್ನು ಬಳಸಿಕೊಂಡು, ವಹಿವಾಟಿನ ಅಭಿವೃದ್ಧಿಗೆ ಯೋಜನೆ ರೂಪಿಸಬೇಕು ಎಂದು ತಿಳಿಸಿದರು.</p>.<p>ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಎಫ್ಕೆಸಿಸಿಐನ ಅಂತರರಾಷ್ಟ್ರೀಯ ವ್ಯವಹಾರದ ಅಧ್ಯಕ್ಷ ಡಾ.ವಿ.ಜಿ. ಕಿರಣ್ಕುಮಾರ್ ವೇದಿಕೆಯಲ್ಲಿದ್ದರು. ಕೆಸಿಸಿಐ ಉಪಾಧ್ಯಕ್ಷ ಶಶಿಧರ್ ಪೈ ಮಾರೂರು ಸ್ವಾಗತಿಸಿದರು. ಕೋಶಾಧಿಕಾರಿ ಗಣೇಶ್ ಕಾಮತ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಕರಾವಳಿಯ ಉದ್ಯಮಿಗಳು, ವ್ಯಾಪಾರಿಗಳು ಇಲ್ಲಿನ ಮೂಲಸೌಕರ್ಯಗಳಾದ ಎನ್ಎಂಪಿಟಿ, ಮಂಗಳೂರು ವಿಮಾನ ನಿಲ್ದಾಣದಂತಹ ಸೌಲಭ್ಯಗಳ ಸಮರ್ಪಕ ಬಳಕೆ ಮಾಡಿಕೊಂಡು, ಈ ಭಾಗದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ರೈಲ್ವೆ ಎಡಿಜಿಪಿ ಭಾಸ್ಕರ್ ರಾವ್ ಹೇಳಿದರು.</p>.<p>ಕೆನರಾ ವಾಣಿಜ್ಯೋದ್ಯಮ ಸಂಸ್ಥೆ ವತಿಯಿಂದ ನಗರದ ಹೋಟೆಲ್ ಓಷಿಯನ್ ಪರ್ಲ್ನಲ್ಲಿ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.</p>.<p>ನಗರದಲ್ಲಿ ಐಟಿ ಪಾರ್ಕ್ ಆರಂಭಿಸುವ ನಿಟ್ಟಿನಲ್ಲಿ ಕೆನರಾ ವಾಣಿಜ್ಯೋದ್ಯಮ ಸಂಸ್ಥೆ ವಹಿಸಿರುವ ಶ್ರಮ ಶ್ಲಾಘನೀಯ. ಮಂಗಳೂರು ಸೇರಿದಂತೆ ಕಾರವಾರದವರೆಗೆ ಕರಾವಳಿಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಬೇಕು ಎಂದು ಸಲಹೆ ನೀಡಿದರು.</p>.<p>ಕೆನರಾ ವಾಣಿಜ್ಯೋದ್ಯಮ ಸಂಸ್ಥೆ, ಈ ಭಾಗದ ಹಾಗೂ ದೇಶದ ಅಭಿವೃದ್ಧಿಗೆ ಮಾದರಿ ವ್ಯಕ್ತಿಗಳನ್ನು ರೂಪಿಸಬೇಕು ಎಂದರು.</p>.<p>1920 ರಲ್ಲಿ ಕಂಡುಬಂದ ಸಾಂಕ್ರಾಮಿಕದಿಂದ ಜನರ ಜೀವನದಲ್ಲಿ ಅಮೂಲಾಗ್ರ ಬದಲಾವಣೆ ಆಯಿತು. ಅದೇ ರೀತಿ ಸದ್ಯದ ಕೋವಿಡ್–19 ಪಿಡುಗಿನಿಂದ ಸ್ವಚ್ಛತೆ ಸೇರಿದಂತೆ ಸಾಕಷ್ಟು ಕಲಿತಿದ್ದು, ಇಂತಹ ಧನಾತ್ಮಕ ಅಂಶಗಳನ್ನು ಬಳಸಿಕೊಂಡು, ವಹಿವಾಟಿನ ಅಭಿವೃದ್ಧಿಗೆ ಯೋಜನೆ ರೂಪಿಸಬೇಕು ಎಂದು ತಿಳಿಸಿದರು.</p>.<p>ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಎಫ್ಕೆಸಿಸಿಐನ ಅಂತರರಾಷ್ಟ್ರೀಯ ವ್ಯವಹಾರದ ಅಧ್ಯಕ್ಷ ಡಾ.ವಿ.ಜಿ. ಕಿರಣ್ಕುಮಾರ್ ವೇದಿಕೆಯಲ್ಲಿದ್ದರು. ಕೆಸಿಸಿಐ ಉಪಾಧ್ಯಕ್ಷ ಶಶಿಧರ್ ಪೈ ಮಾರೂರು ಸ್ವಾಗತಿಸಿದರು. ಕೋಶಾಧಿಕಾರಿ ಗಣೇಶ್ ಕಾಮತ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>