<p><strong>ಉಜಿರೆ:</strong> ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿರುವ ರಾಮಕ್ಷೇತ್ರದ ಶಾಖಾಮಠವನ್ನು ಅಯೋಧ್ಯೆಯಲ್ಲಿ ಪ್ರಾರಂಭಿಸಲು ಯೋಜಿಸಿದ್ದು, ನೂತನ ಕಟ್ಟಡದ ಶಿಲಾನ್ಯಾಸ ಮತ್ತು ಭೂಮಿಪೂಜೆ ಸಮಾರಂಭ ಮೇ 19ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ ಎಂದು ರಾಮಕ್ಷೇತ್ರದ ಪೀಠಾಧೀಶ, ಮಹಾಮಂಡಲೇಶ್ವರ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.</p>.<p>ಶುಕ್ರವಾರ ಕನ್ಯಾಡಿಯಲ್ಲಿ ರಾಮಕ್ಷೇತ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.</p>.<p>ಒಂದು ಎಕರೆಯಲ್ಲಿ 31 ಸಾವಿರ ಚದರ ಅಡಿ ವಿಸ್ತೀರ್ಣ ಹೊಂದಿರುವ ನಾಲ್ಕು ಅಂತಸ್ತುಗಳ ಕಟ್ಟಡ ನಿರ್ಮಾಣಗೊಳ್ಳಲಿದೆ. ಇದರಲ್ಲಿ 40 ಕೊಠಡಿಗಳಿದ್ದು 700 ಮಂದಿಗೆ ಪ್ರಾರ್ಥನೆ, ಧ್ಯಾನಕ್ಕೆ ಅನುಕೂಲವಾಗಿರುವ ಸಭಾಭವನವನ್ನು ಅಳವಡಿಸಲಾಗುವುದು ಎಂದು ಸ್ವಾಮೀಜಿ ಮಾಹಿತಿ ನೀಡಿದರು.</p>.<p>ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಮಧುಬಂಗಾರಪ್ಪ, ಮಂಕಾಲ ಎಸ್.ವೈದ್ಯ, ಶಾಸಕರಾದ ಹರೀಶ್ ಪೂಂಜ, ಸುನಿಲ್ ಕುಮಾರ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ರಾಮ ಜನ್ಮಭೂಮಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸಂಪತ್ರಾಯ್, ವಿವಿಧ ಮಠಾಧಿಪತಿಗಳು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ:</strong> ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿರುವ ರಾಮಕ್ಷೇತ್ರದ ಶಾಖಾಮಠವನ್ನು ಅಯೋಧ್ಯೆಯಲ್ಲಿ ಪ್ರಾರಂಭಿಸಲು ಯೋಜಿಸಿದ್ದು, ನೂತನ ಕಟ್ಟಡದ ಶಿಲಾನ್ಯಾಸ ಮತ್ತು ಭೂಮಿಪೂಜೆ ಸಮಾರಂಭ ಮೇ 19ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ ಎಂದು ರಾಮಕ್ಷೇತ್ರದ ಪೀಠಾಧೀಶ, ಮಹಾಮಂಡಲೇಶ್ವರ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.</p>.<p>ಶುಕ್ರವಾರ ಕನ್ಯಾಡಿಯಲ್ಲಿ ರಾಮಕ್ಷೇತ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.</p>.<p>ಒಂದು ಎಕರೆಯಲ್ಲಿ 31 ಸಾವಿರ ಚದರ ಅಡಿ ವಿಸ್ತೀರ್ಣ ಹೊಂದಿರುವ ನಾಲ್ಕು ಅಂತಸ್ತುಗಳ ಕಟ್ಟಡ ನಿರ್ಮಾಣಗೊಳ್ಳಲಿದೆ. ಇದರಲ್ಲಿ 40 ಕೊಠಡಿಗಳಿದ್ದು 700 ಮಂದಿಗೆ ಪ್ರಾರ್ಥನೆ, ಧ್ಯಾನಕ್ಕೆ ಅನುಕೂಲವಾಗಿರುವ ಸಭಾಭವನವನ್ನು ಅಳವಡಿಸಲಾಗುವುದು ಎಂದು ಸ್ವಾಮೀಜಿ ಮಾಹಿತಿ ನೀಡಿದರು.</p>.<p>ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಮಧುಬಂಗಾರಪ್ಪ, ಮಂಕಾಲ ಎಸ್.ವೈದ್ಯ, ಶಾಸಕರಾದ ಹರೀಶ್ ಪೂಂಜ, ಸುನಿಲ್ ಕುಮಾರ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ರಾಮ ಜನ್ಮಭೂಮಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸಂಪತ್ರಾಯ್, ವಿವಿಧ ಮಠಾಧಿಪತಿಗಳು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>