ಅ.28 ರಂದು ರಾತ್ರಿ ಪ್ರಭಾಕರ ಕಾಮತ್ ಅವರು ಬಿಜೈ ಕಾಪಿಕಾಡ್ನ 1ನೇ ಅಡ್ಡರಸ್ತೆಯಲ್ಲಿ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕೆಎಸ್ಆರ್ಟಿಸಿ ಕಡೆಯಿಂದ ಬಿಜೈ ಕಾಪಿಕಾಡ್ ಕಡೆಗೆ ಅತಿ ವೇಗದಿಂದ ಬಂದ ಸ್ಕೂಟರ್ ಡಿಕ್ಕಿ ಹೊಡೆದಿತ್ತು. ಕಾಮತ್ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಸ್ಪಂದಿಸದೇ ಮೃತಪಟ್ಟಿದ್ದಾರೆ.