ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನಸಭಾ ಕ್ಷೇತ್ರಗಳಿಗೆ ತಲಾ ಒಂದು ತುಕಡಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಇನ್ನಷ್ಟು ತುಕಡಿಗಳು ಜಿಲ್ಲೆಗೆ ಬರಲಿವೆ. ಈ ತುಕಡಿಗಳು ಚೆಕ್ಪೋಸ್ಟ್ ಕರ್ತವ್ಯ, ಸ್ಟ್ರಾಂಗ್ ರೂಮ್ ಭದ್ರತೆ, ಪ್ರಮುಖ ಸ್ಥಳಗಳಲ್ಲಿ ರೂಟ್ ಮಾರ್ಚ್, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸ್ಥಳೀಯ ಪೊಲೀಸರಿಗೆ ಸಹಾಯ ಹಾಗೂ ಚುನಾವಣೆಗೆ ಸಂಬಂಧಿಸಿದ ಇತರ ಕರ್ತವ್ಯಗಳನ್ನು ನಿರ್ವಹಿಸಲಿವೆ ಎಂದು ಅವರು ವಿವರಿಸಿದ್ದಾರೆ.