ಸಹಕಾರಿ ಸಂಘದ ಕಾರ್ಯದರ್ಶಿ ಕೆ.ರತೀಶನ್, ಜಬ್ಬಾರ್ ಬಂಧಿತರು. ಹಗರಣ ಗೊತ್ತಾಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ ರತೀಶನ್ ಹಾಗೂ ಜಬ್ಬಾರ್, ತಮಿಳುನಾಡಿನ ನಾಮಕ್ಕಲ್ನ ವಸತಿಗೃಹದಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಸತಿಗೃಹಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಮೊಬೈಲ್ ಬಳಸದ ಕಾರಣ ಅವರ ಸುಳಿವು ಸಿಗಲಿಲ್ಲ. ಆರೋಪಿಯ ಸಂಬಂಧಿಕರು ಹಾಗೂ ಸ್ನೇಹಿತರ ಮೂಲಕ ಆರೋಪಿಗಳು ಅವಿತಿರುವ ಬಗ್ಗೆ ಪೊಲೀಸರು ಮಾಹಿತಿ ಪಡೆದಿದ್ದರು.