<p><strong>ಮಂಗಳೂರು</strong>: ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆ ಆಯೋಜಿಸಿರುವ ಉಚಿತ ಬ್ಯಾಡ್ಮಿಂಟನ್ ತರಬೇತಿ ಏ 1ರಿಂದ 30ರ ವರೆಗೆ ಫಾದರ್ ಮುಲ್ಲರ್ ಒಳಾಂಗಣದ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಉಪಾಧ್ಯಕ್ಷ ಅವಿನಾಶ್ ಸುವರ್ಣ ತಿಳಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಐದು ವರ್ಷ ಮೇಲಿನ ಬಾಲಕ–ಬಾಲಕಿಯರು ಮತ್ತು ಯುವಕ–ಯುವತಿಯರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಮಾಹಿತಿ 8217221202 ಅಥವಾ 7975525395 ಸಂಪರ್ಕಿಸಬಹುದು. dkdbamangalore@gmail.com ಮೂಲಕ ನೋಂದಣಿ ಮಾಡಬಹುದಾಗಿದೆ ಎಂದು ತಿಳಿಸಿದರು.</p>.<p>ವಿಶೇಷ ತಂತ್ರಗಳನ್ನು ಹೇಳಿಕೊಡಲು ಬೆಂಗಳೂರಿನಿಂದ ಕೋಚ್ ಕರೆಸಲಾಗುತ್ತಿದೆ. ಸಂಸ್ಥೆಯಲ್ಲಿ ನಿರಂತರವಾಗಿ ಚಟುವಟಿಕೆ ನಡೆಯುತ್ತಿದ್ದು ಈ ತರಬೇತಿ ಶಿಬಿರದ ನಂತರ ಹೆಚ್ಚುವರಿ ತರಬೇತಿ ನೀಡುವ ಚಿಂತನೆಯೂ ಇದೆ ಎಂದು ಅವರು ವಿವರಿಸಿದರು.</p>.<p>ಜಂಟಿ ಕಾರ್ಯದರ್ಶಿ ಎ.ಎಸ್ ವೆಂಕಟೇಶ್, ಖಜಾಂಚಿ ದಯಾನಂದ್ ಪಿ.ಎಸ್, ಕಾರ್ಯಕಾರಿ ಸಮಿತಿ ಸದಸ್ಯರಾದ ಗಣೇಶ್ ಪ್ರಸಾದ್ ಮತ್ತು ಸುರೇಶ್ ಎಚ್.ಪಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆ ಆಯೋಜಿಸಿರುವ ಉಚಿತ ಬ್ಯಾಡ್ಮಿಂಟನ್ ತರಬೇತಿ ಏ 1ರಿಂದ 30ರ ವರೆಗೆ ಫಾದರ್ ಮುಲ್ಲರ್ ಒಳಾಂಗಣದ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಉಪಾಧ್ಯಕ್ಷ ಅವಿನಾಶ್ ಸುವರ್ಣ ತಿಳಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಐದು ವರ್ಷ ಮೇಲಿನ ಬಾಲಕ–ಬಾಲಕಿಯರು ಮತ್ತು ಯುವಕ–ಯುವತಿಯರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಮಾಹಿತಿ 8217221202 ಅಥವಾ 7975525395 ಸಂಪರ್ಕಿಸಬಹುದು. dkdbamangalore@gmail.com ಮೂಲಕ ನೋಂದಣಿ ಮಾಡಬಹುದಾಗಿದೆ ಎಂದು ತಿಳಿಸಿದರು.</p>.<p>ವಿಶೇಷ ತಂತ್ರಗಳನ್ನು ಹೇಳಿಕೊಡಲು ಬೆಂಗಳೂರಿನಿಂದ ಕೋಚ್ ಕರೆಸಲಾಗುತ್ತಿದೆ. ಸಂಸ್ಥೆಯಲ್ಲಿ ನಿರಂತರವಾಗಿ ಚಟುವಟಿಕೆ ನಡೆಯುತ್ತಿದ್ದು ಈ ತರಬೇತಿ ಶಿಬಿರದ ನಂತರ ಹೆಚ್ಚುವರಿ ತರಬೇತಿ ನೀಡುವ ಚಿಂತನೆಯೂ ಇದೆ ಎಂದು ಅವರು ವಿವರಿಸಿದರು.</p>.<p>ಜಂಟಿ ಕಾರ್ಯದರ್ಶಿ ಎ.ಎಸ್ ವೆಂಕಟೇಶ್, ಖಜಾಂಚಿ ದಯಾನಂದ್ ಪಿ.ಎಸ್, ಕಾರ್ಯಕಾರಿ ಸಮಿತಿ ಸದಸ್ಯರಾದ ಗಣೇಶ್ ಪ್ರಸಾದ್ ಮತ್ತು ಸುರೇಶ್ ಎಚ್.ಪಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>