ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡವೇ ಪ್ರಥಮ ಭಾಷೆ ಆಗಬೇಕು. ಇಂಗ್ಲಿಷ್ ಅಥವಾ ಭಾರತದ ಬೇರೆ ಯಾವುದೇ ಭಾಷೆಯನ್ನು ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಕಲಿಸಿದರೆ ಸಾಕು. ಆಂಗ್ಲಭಾಷಾ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಕಡ್ಡಾಯವಾಗಿ ಪ್ರಥಮ ಭಾಷೆ ಆಗಬೇಕು, ಗ್ರಂಥಾಲಯ ಇಲಾಖೆಗೆ ಕಾಯಕಲ್ಪ ನೀಡಬೇಕು, ಖಾಸಗಿ ಗ್ರಂಥಾಲಯಗಳ ಪುನಶ್ಚೇತನ ಆಗಬೇಕು, ಶುದ್ಧ ಕನ್ನಡ ಭಾಷೆ ಬಳಕೆಗೆ ಆದ್ಯತೆ ನೀಡಬೇಕು, ಪುಸ್ತಕ ಮಾರಾಟಕ್ಕೆ ಸರ್ಕಾರ ಪ್ರತ್ಯೇಕ ಶಾಖೆ ಆರಂಭಿಸಬೇಕು. ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಮೂಡಲು ಕ್ರಮ ಕೈಗೊಳ್ಳಬೇಕು– ಇವು ಸಮ್ಮೇಳನದ ಇತರ ನಿರ್ಣಯಗಳು.