ಪ್ರದೀಪ್ ನಿರ್ದೇಶನದ ಚಿತ್ರಕ್ಕೆ ಮಧು ಸುರತ್ಕಲ್ ಸಂಭಾಷಣೆ ಬರೆದಿದ್ದಾರೆ. ಮುಖ್ಯ ಪಾತ್ರದಲ್ಲಿ ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ ಮತ್ತಿತರರು ಇದ್ದಾರೆ. ರವಿ ಸುವರ್ಣ ಛಾಯಾಗ್ರಹಣ, ಪ್ರಜ್ವಲ್ ಸುವರ್ಣ ಸಂಕಲನ, ವೆಂಕಟೇಶ್ ಬೆಂಗಳೂರು ಕಲೆ, ಡೊಲ್ಫಿನ್ ಕೊಳಲಗಿರಿ ಸಂಗೀತ, ಕಾರ್ತಿಕ್ ಮೂಲ್ಕಿ ಹಿನ್ನೆಲೆ ಸಂಗೀತ ಒದಗಿಸಿದ್ದಾರೆ ಎಂದು ಹೇಳಿದರು.