<p><strong>ಮಂಗಳೂರು</strong>: ಜಪ್ಪಿನಮೊಗರಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 16ನೇ ವರ್ಷದ ಗಣೇಶೋತ್ಸವವು ಸೆ.6ರಿಂದ 8ರ ವರೆಗೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ನಾಗೇಂದ್ರ ಕುಮಾರ್ ಹೇಳಿದರು.</p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಅವರು, ‘ಸೆ.6ರಂದು ಸಂಜೆ 4 ಗಂಟೆಗೆ ಪೂರ್ಣಕುಂಭ ಸ್ವಾಗತದೊಂದಿಗೆ ಗಣೇಶ ಮೂರ್ತಿಯನ್ನು ಮಂಟಪಕ್ಕೆ ತರಲಾಗುವುದು. ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ರಾತ್ರಿ 9ರಿಂದ ದೇವಿದಾಸ್ ಕಾಪಿಕಾಡ್ ರಚಿಸಿ, ನಿರ್ದೇಶಿಸಿರುವ ‘ಏಲ್ಲಾ ಗ್ಯಾರಂಟಿ ಅತ್ತ್..!’ ತುಳು ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ. ಸೆ.7ರ ಬೆಳಿಗ್ಗೆ 7 ಗಂಟೆಗೆ ವಿಠಲದಾಸ ತಂತ್ರಿ ಪೌರೋಹಿತ್ಯದಲ್ಲಿ ದೇವರ ಪ್ರತಿಷ್ಠಾಪನೆ ನಡೆಯಲಿದೆ. 9 ಗಂಟೆಗೆ ಸಭಾ ಕಾರ್ಯಕ್ರಮ, 9.30ಕ್ಕೆ ಹಸಿರು ತೆನೆ ವಿತರಣೆ, 2 ಗಂಟೆಗೆ ಭೋಜರಾಜ ವಾಮಂಜೂರು, ಅರವಿಂದ ಬೋಳಾರ್ ಅಭಿನಯದಲ್ಲಿ ‘ತಿರುಮಲೆತ ತಿಮ್ಮಪ್ಪೆ’ ತುಳು ಯಕ್ಷಗಾನ ಪ್ರದರ್ಶನಗೊಳ್ಳಲಿದೆ’ ಎಂದರು.</p>.<p>ಸಂಜೆ 5.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, 7.30ಕ್ಕೆ ಸಾರ್ವಜನಿಕ ರಂಗಪೂಜೆ, ರಾತ್ರಿ 9ರಿಂದ ಕಲಾವತಿ ದಯಾನಂದ ಉಡುಪಿ ತಂಡದಿಂದ ‘ಸಂಗೀತ ಸಂಜೆ’, ಸೆ.8ಕ್ಕೆ ಬೆಳಿಗ್ಗೆ ಮಹಾಗಣಯಾಗ, ಧಾರ್ಮಿಕ ಸಭಾ ಕಾರ್ಯಕ್ರಮ, ಮಧ್ಯಾಹ್ನ ಅನ್ನ ಸಂತರ್ಪಣೆ, 2 ಗಂಟೆಯಿಂದ ‘ತೆಲಿಕೆದ ಕಮ್ಮೆನ’ ತುಳುಹಾಸ್ಯ ಕಾರ್ಯಕ್ರಮ, ಸಂಜೆ 4.30ರಿಂದ ಗಣೇಶಮೂರ್ತಿಯ ಶೋಭಾಯಾತ್ರೆ, ಕಡೆಕಾರ್ನಲ್ಲಿ ಜಲಸ್ತಂಭನ ಮಾಡಲಾಗುವುದು ಎಂದರು.</p>.<p>ಉದಯ್ ಕೊಟ್ಟಾರಿ, ಸುಧಾಕರ್, ಶ್ರೀಧರ್ ರಾಜ್ ಶೆಟ್ಟಿ, ಸುಭಾಷ್ ಅಡಪ್ಪ, ಪ್ರಾಣೇಶ್ ರಾವ್,ಬಾಲಕೃಷ್ಣನ್ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಜಪ್ಪಿನಮೊಗರಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 16ನೇ ವರ್ಷದ ಗಣೇಶೋತ್ಸವವು ಸೆ.6ರಿಂದ 8ರ ವರೆಗೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ನಾಗೇಂದ್ರ ಕುಮಾರ್ ಹೇಳಿದರು.</p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಅವರು, ‘ಸೆ.6ರಂದು ಸಂಜೆ 4 ಗಂಟೆಗೆ ಪೂರ್ಣಕುಂಭ ಸ್ವಾಗತದೊಂದಿಗೆ ಗಣೇಶ ಮೂರ್ತಿಯನ್ನು ಮಂಟಪಕ್ಕೆ ತರಲಾಗುವುದು. ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ರಾತ್ರಿ 9ರಿಂದ ದೇವಿದಾಸ್ ಕಾಪಿಕಾಡ್ ರಚಿಸಿ, ನಿರ್ದೇಶಿಸಿರುವ ‘ಏಲ್ಲಾ ಗ್ಯಾರಂಟಿ ಅತ್ತ್..!’ ತುಳು ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ. ಸೆ.7ರ ಬೆಳಿಗ್ಗೆ 7 ಗಂಟೆಗೆ ವಿಠಲದಾಸ ತಂತ್ರಿ ಪೌರೋಹಿತ್ಯದಲ್ಲಿ ದೇವರ ಪ್ರತಿಷ್ಠಾಪನೆ ನಡೆಯಲಿದೆ. 9 ಗಂಟೆಗೆ ಸಭಾ ಕಾರ್ಯಕ್ರಮ, 9.30ಕ್ಕೆ ಹಸಿರು ತೆನೆ ವಿತರಣೆ, 2 ಗಂಟೆಗೆ ಭೋಜರಾಜ ವಾಮಂಜೂರು, ಅರವಿಂದ ಬೋಳಾರ್ ಅಭಿನಯದಲ್ಲಿ ‘ತಿರುಮಲೆತ ತಿಮ್ಮಪ್ಪೆ’ ತುಳು ಯಕ್ಷಗಾನ ಪ್ರದರ್ಶನಗೊಳ್ಳಲಿದೆ’ ಎಂದರು.</p>.<p>ಸಂಜೆ 5.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, 7.30ಕ್ಕೆ ಸಾರ್ವಜನಿಕ ರಂಗಪೂಜೆ, ರಾತ್ರಿ 9ರಿಂದ ಕಲಾವತಿ ದಯಾನಂದ ಉಡುಪಿ ತಂಡದಿಂದ ‘ಸಂಗೀತ ಸಂಜೆ’, ಸೆ.8ಕ್ಕೆ ಬೆಳಿಗ್ಗೆ ಮಹಾಗಣಯಾಗ, ಧಾರ್ಮಿಕ ಸಭಾ ಕಾರ್ಯಕ್ರಮ, ಮಧ್ಯಾಹ್ನ ಅನ್ನ ಸಂತರ್ಪಣೆ, 2 ಗಂಟೆಯಿಂದ ‘ತೆಲಿಕೆದ ಕಮ್ಮೆನ’ ತುಳುಹಾಸ್ಯ ಕಾರ್ಯಕ್ರಮ, ಸಂಜೆ 4.30ರಿಂದ ಗಣೇಶಮೂರ್ತಿಯ ಶೋಭಾಯಾತ್ರೆ, ಕಡೆಕಾರ್ನಲ್ಲಿ ಜಲಸ್ತಂಭನ ಮಾಡಲಾಗುವುದು ಎಂದರು.</p>.<p>ಉದಯ್ ಕೊಟ್ಟಾರಿ, ಸುಧಾಕರ್, ಶ್ರೀಧರ್ ರಾಜ್ ಶೆಟ್ಟಿ, ಸುಭಾಷ್ ಅಡಪ್ಪ, ಪ್ರಾಣೇಶ್ ರಾವ್,ಬಾಲಕೃಷ್ಣನ್ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>