ಪುಲಪೇಡಿ ಮತ್ತು ಇತರ ಕತೆಗಳು, ಹೆಜ್ಜೆ ಮೂಡದ ಹಾದಿಯಲ್ಲಿ, ಹೊಸ ಹೆಜ್ಜೆ, ವಾಸ್ತವ, ಕ್ಷಮಯಾ ಧರಿತ್ರಿ, ನೆಲೆ ತಪ್ಪಿದ ಹಕ್ಕಿ, ಮನ್ನಣೆಯ ದಾಹ, ಈ ಪ್ರಜಾ ರಾಜ್ಯದಲ್ಲಿ, ಸಂಕ್ರಮಣ, ಚಿನ್ನದ ಸೂಜಿ ಕಥಾಸಂಕಲನಗಳು. ಹೊನ್ನಳ್ಳಿಯಲ್ಲೊಮ್ಮೆ, ಸೆರೆಯಿಂದ ಹೊರಗೆ, ಪಯಣದ ಹಾದಿಯಲ್ಲಿ, ಮೌನರಾಗಗಳು, ಅದೃಷ್ಟ ರೇಖೆ, ಕನಕಾಂಬರಿ, ಸೆರಗಿನ ಕೆಂಡ, ಇನ್ನೊಂದು ಅಧ್ಯಾಯ, ಬಂಗಾರದ ಜಿಂಕೆ ಹಿಂದೆ ಕಾದಂಬರಿಗಳು. ಆಯ್ದ ಕತೆಗಳು, ಪ್ರತಿಬಿಂಬ, ಮುಳಿಯ ಮೂಕಾಂಬಿಕೆ, ಏರ್ಯ ಚಂದ್ರಭಾಗಿ ರೈ ಸಂಪಾದಿತ ಕೃತಿಗಳು. ಸೆರೆಯಿಂದ ಹೊರಗೆ ಕಾದಂಬರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಮಲ್ಲಿಕಾ ಪ್ರಶಸ್ತಿ, ಇನ್ನೊಂದು ಅಧ್ಯಾಯ ಕಾದಂಬರಿಗೆ ವನಿತಾ ಕಾದಂಬರಿ ಸ್ಪರ್ಧೆಯಲ್ಲಿ ಬಹುಮಾನ, ಕೃಷ್ಣಬಾಯಿ ದತ್ತಿನಿಧಿ ಪ್ರಶಸ್ತಿ, ನೀರ್ಪಾಜೆ ಭೀಮಭಟ್ಟ ಪ್ರಶಸ್ತಿ, ಅನುಪಮಾ ಪ್ರಶಸ್ತಿ, ಪುಲಪೇಡಿ ಕತೆಯಾಧಾರಿತ ರೇಡಿಯೋ ನಾಟಕಕ್ಕೆ ರಾಷ್ಟ್ರೀಯ ನಾಟಕೋತ್ಸವದಲ್ಲಿ ಮೊದಲ ಬಹುಮಾನ ದೊರೆತಿದೆ.