‘ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಹಲ್ಲೆ ಪ್ರಕರಣ, ನಗರ ಪೂರ್ವ ಠಾಣೆಯಲ್ಲಿ ದಾಖಲಾಗಿದ್ದ ಕಳವು ಮತ್ತು ಅಕ್ರಮ ಪಿಸ್ತೂಲ್ ಹೊಂದಿದ ಪ್ರಕರಣಗಳು, ಬರ್ಕೆ ಠಾಣೆಯಲ್ಲಿ ದಾಖಲಾಗಿದ್ದ ಸರ ಕಳವು ಪ್ರಕರಣ, ಉಳ್ಳಾಲ ಠಾಣೆಯಲ್ಲಿ ದಾಖಲಾಗಿದ್ದ ಹಲ್ಲೆ ಪ್ರಕರಣ, ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದ ಹಲ್ಲೆ ಮತ್ತು ಕಳವು ಪ್ರಕರಣಗಳು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಗಾಂಜಾ ಮಾರಾಟ ಪ್ರಕರಣವೂ ಸೇರಿದಂತೆ 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನಿಶಾಂತ್ ಶೆಟ್ಟಿ ಆರೋಪಿಯಾಗಿದ್ದ’ ಎಂದೂ ಅವರು ಮಾಹಿತಿ ನೀಡಿದರು.