ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಾಲ್ವರನ್ನು ಬಂಧಿಸಿರುವ ಪೊಲೀಸರು, ಆರೋಪಿಗಳಿಂದ 200 ಕೆಜಿ ಗಾಂಜಾ, 3 ತಲವಾರ್, ಒಂದು ಚಾಕು ವಶಕ್ಕೆ ಪಡೆದಿದ್ದಾರೆ.
ಮೂಡುಬಿದಿರೆ ಠಾಣೆ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ.
ಕಾಸರಗೋಡಿನ ಮುಹಮ್ಮದ್ ಫಾರೂಕ್, ಕೊಡಗಿನ ಸೈಯ್ಯದ ಮೊಹಮ್ಮದ್, ಮುಡಿಪಿನ ಮೊಹಮ್ಮದ್ ಅನ್ಸಾರ್, ಮಂಜೇಶ್ವರದ ಮೊಹಿಯುದ್ದೀನ್ ನವಾಜ್ ಬಂಧಿತ ಆರೋಪಿಗಳು ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.