ನಗರದಲ್ಲಿ ಕಾವೂರು ಬಳಿಯ ಮುಳ್ಳಕಾಡು, ಸುರತ್ಕಲ್ ಹಾಗೂ ಪಚ್ಚನಾಡಿಯಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕಗಳು (ಎಸ್ಟಿಪಿ) ಇವೆ. ತಗ್ಗು ಪ್ರದೇಶ ಒಳಚರಂಡಿಗಳಲ್ಲಿ ಸಂಗ್ರಹಗೊಳ್ಳುವ ದ್ರವತ್ಯಾಜ್ಯವನ್ನು 12 ವೆಟ್ವೆಲ್ಗಳ ಮೂಲಕ ಎಸ್ಟಿಪಿಗಳಿಗೆ ಪಂಪ್ ಮಾಡಬೇಕಾಗುತ್ತದೆ. ಈ ಕಾರ್ಯ ಸ್ಥಗಿತಗೊಂಡಿರುವುದರಿಂದ ಒಳಚರಂಡಿ ಮೇಲೆ ಒತ್ತಡ ಹೆಚ್ಚುತ್ತಿದೆ. ಒಳಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುವ ಪರಿಸ್ಥಿತಿ ಒಂದೆಡೆಯಾದರೆ, ಎಸ್ಟಿಪಿಗಳು ಕಾರ್ಯ ನಿರ್ವಹಿಸದ ಕಾರಣ ಶೌಚಯುಕ್ತ ದ್ರವ ತ್ಯಾಜ್ಯ ಸಂಸ್ಕರಣೆಗೆ ಒಳಗಾಗುತ್ತಿಲ್ಲ. ಇದು ಗಂಭೀರ ಆರೋಗ್ಯ ಸಮಸ್ಯೆಗೂ ಕಾರಣವಾಗಬಹುದು ಎಂಬ ಆತಂಕ ಎದುರಾಗಿದೆ.