ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾರ್ಯಕಾರಿ ಸಮಿತಿಯಲ್ಲಿ ನಿರ್ಧರಿಸಲಾಗಿದೆ. ಬೂತ್ ಮಟ್ಟದಲ್ಲಿ ಮಹಾಸಭಾವನ್ನು ಬಲಪಡಿಸಲಾಗುವುದು. ಮುಂದಿನ ವಿಧಾನಸಭಾ ಚುನಾವಣೆ ಸಂಘಟನೆಗೆ ಮಹತ್ವದ್ದಾಗಲಿದೆ. ಜನರ ಬಳಿಗೆ ತಲುಪುವುದಕ್ಕಾಗಿ ಸಾಮಾಜಿಕ ತಾಣಗಳನ್ನು ಬಳಸಲಾಗುವುದು ಎಂದು ಅವರು ತಿಳಿಸಿದರು.