ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಕೀಲ ಸಮುದಾಯವನ್ನು ಚಿತ್ರದಲ್ಲಿ ಅವಹೇಳನ ಮಾಡಲಾಗಿದೆ. ಅಲ್ಲದೇ ನ್ಯಾಯಾಂಗ ವ್ಯವಸ್ಥೆ, ವಕೀಲರ ಬಗ್ಗೆ ಕೀಳು ಅಭಿರುಚಿಯಲ್ಲಿ ಅಪಹಾಸ್ಯ ಮಾಡಲಾಗಿದೆ ಎಂದು ವಕೀಲರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರಿಂದ ಮಂಗಳೂರು ಕಿರಿಯ ಪ್ರಧಾನ ನ್ಯಾಯಾಲಯವು ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದೆ.ನ್ಯಾಯಾಲಯದ ಆದೇಶ ಗೌರವಿಸುತ್ತೆವೆ. ಚಿತ್ರದ ದೃಶ್ಯಗಳಿಂದ ವಕೀಲ ಸಮುದಾಯಕ್ಕೆ ನೋವಾಗಿದ್ದರೆ ಸಮುದಾಯದ ಕ್ಷಮೆ ಕೇಳುತ್ತೇವೆ. ಇದು ಉದ್ದೇಶ ಪೂರ್ವಕವಾಗಿ ನಡೆದಿಲ್ಲ. ಪ್ರೇಕ್ಷಕರಿಗೆ ಹಾಸ್ಯ ನೀಡುವ ಬರದಲ್ಲಿ ಇಂತಹ ಪ್ರಮಾದ ಆಗಿರಬಹುದು’ ಎಂದರು.