ಬಬೀಶ್ ಪೂಜಾರಿ ಎಂಬುವರು ಮಾರುತಿ ಕಾರಿನಲ್ಲಿ ತೊಕ್ಕೊಟ್ಟು ಫ್ಲೈ ಓವರ್ ಕೆಳಗಿನಿಂದ ಹೋಗುತ್ತಿದ್ದ ಸಂದರ್ಭದಲ್ಲಿ ನಾಗುರಿ ಸಂಚಾರಿ ಠಾಣಾ ಎಎಸ್ಐ ಆಲ್ಬರ್ಟ್ ಲಸ್ರಾದೊ ಅವರು ಪರಿಶೀಲನೆಗಾಗಿ ನಿಲ್ಲಿಸಿದ್ದಾರೆ. ದಾಖಲೆಗಳನ್ನು ಪರಿಶೀಲಿಸಿದ ನಂತರ, ಕಾರಿನ ನಂಬರ್ ಪ್ಲೇಟ್ನಲ್ಲಿ ಸ್ಟಿಕರ್ ಅಂಟಿಸಿರುವುದು ಕಾನೂನು ವಿರುದ್ಧವಾಗಿದೆ ಹಾಗೂ ಕಾರಿನ ಗಾಜಿನಲ್ಲಿಯೂ ಸ್ಟಿಕ್ಕರ್ ಅಂಟಿಸಲಾಗಿದೆ, ಅದಕ್ಕಾಗಿ ದಂಡ ಪಾವತಿಸಬೇಕು ಎಂದು ಹೇಳಿದ್ದಾರೆ. ‘ಕಾರಿನಲ್ಲಿರುವುದು ಧಾರ್ಮಿಕ ಭಾವನೆಗಳಿಗೆ ಸಂಬಂಧಿಸಿದ ಸ್ಟಿಕರ್, ಇದನ್ನು ತೆಗೆಯುವುದಿಲ್ಲ’ ಎಂದು ಕಾರು ಚಾಲಕ ಬಬೀಶ್ ಪೂಜಾರಿ ಆಕ್ರೋಶ ವ್ಯಕ್ತಪಡಿಸಿ, ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಕಾರ್ಯಕರ್ತರು ಎಎಸ್ಐ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.