ಬೆಳಿಗ್ಗೆ 9.30ಕ್ಕೆ ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮ ಉದ್ಘಾಟಿಸುವರು. ಕಾಲೇಜಿನ ಸಂಚಾಲಕ ವಸಂತ ಕಾರಂದೂರು ಅಧ್ಯಕ್ಷತೆ ವಹಿಸುವರು. ಶಿವಭಕ್ತಿ ಯೋಗ ಸಂಘದ ಉಪಾಧ್ಯಕ್ಷರಾದ ಶೇಖರ ಪೂಜಾರಿ, ಬಿ.ಜಿ. ಸುವರ್ಣ, ಕಾಲೇಜಿನ ಪ್ರಾಂಶುಪಾಲೆ ಆಶಾಲತಾ ಸುವರ್ಣ, ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ಮನೋಹರ ಶೆಟ್ಟಿ, ನಂದಗೋಪಾಲ ಶೆಣೈ, ಉದ್ಯಮಿಗಳಾದ ಪ್ರಶಾಂತ್ ಸನಿಲ್, ಹರೀಶ್ ಶೇರಿಗಾರ್, ಚಂದನ್ ದಾಸ್, ಹರೀಶ್, ಜಿತೇಂದ್ರ ಕೊಟ್ಟಾರಿ, ನಿವೃತ್ತ ಪ್ರಾಂಶುಪಾಲ ಶ್ರೀಧರ್ ಮಣಿಯಾಣಿ ಭಾಗವಹಿಸುವರು. ಉಪನ್ಯಾಸಕರು ಬೋಧಕೇತರ ಸಿಬ್ಬಂದಿಯನ್ನು ಗೌರವಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.