<p><strong>ಪುತ್ತೂರು</strong>: ಒಬ್ಬಂಟಿಯಾಗಿ ವಾಸ್ತವ್ಯವಿದ್ದ ಮಹಿಳೆಯೊಬ್ಬರ ಮನೆಯೊಂದರಿಂದ ಕಳ್ಳರು ₹ 1ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣ ಕಳವು ಮಾಡಿದ ಘಟನೆ ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲದಲ್ಲಿ ನಡೆದಿದೆ.</p>.<p>ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ಕೃಷ್ಣರಾಯ ನಿಲಯದ ಶೋಭಾ ಅವರ ಮನೆಯಲ್ಲಿ ಕಳವು ನಡೆದಿದ್ದು, ಈ ಅವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಮನೆಯ ಹಿಂಬಾಗಿಲನ್ನು ತೆರೆದು ಒಳನುಗ್ಗಿರುವ ಕಳ್ಳರು, ಮನೆಯೊಳಗಿದ್ದ ಕಪಾಟಿನ ಬೀಗ ಮುರಿದು ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಕಪಾಟಿನಲ್ಲಿದ್ದ 24 ಗ್ರಾಂನ ಲಕ್ಷ್ಮೀ ಸರ (ಚೈನ್), 3ಗ್ರಾಂನ ಒಂದು ಜತೆ ಪಟ್ಟೆಕಲ್ಲಿನ ಕಿವಿಯೋಲೆ, 4 ಗ್ರಾಂನ ಒಂದು ಜತೆ ಜುಮುಕಿ, ಸುಮಾರು ₹ 5 ಸಾವಿರ ಹಣ ಕಳವು ಮಾಡಿದ್ದಾರೆ. ಕಳವಾದ ಚಿನ್ನಾಭರಣದ ಮೌಲ್ಯ ₹ 1.20 ಲಕ್ಷ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಸಂಪ್ಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ಒಬ್ಬಂಟಿಯಾಗಿ ವಾಸ್ತವ್ಯವಿದ್ದ ಮಹಿಳೆಯೊಬ್ಬರ ಮನೆಯೊಂದರಿಂದ ಕಳ್ಳರು ₹ 1ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣ ಕಳವು ಮಾಡಿದ ಘಟನೆ ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲದಲ್ಲಿ ನಡೆದಿದೆ.</p>.<p>ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ಕೃಷ್ಣರಾಯ ನಿಲಯದ ಶೋಭಾ ಅವರ ಮನೆಯಲ್ಲಿ ಕಳವು ನಡೆದಿದ್ದು, ಈ ಅವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಮನೆಯ ಹಿಂಬಾಗಿಲನ್ನು ತೆರೆದು ಒಳನುಗ್ಗಿರುವ ಕಳ್ಳರು, ಮನೆಯೊಳಗಿದ್ದ ಕಪಾಟಿನ ಬೀಗ ಮುರಿದು ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಕಪಾಟಿನಲ್ಲಿದ್ದ 24 ಗ್ರಾಂನ ಲಕ್ಷ್ಮೀ ಸರ (ಚೈನ್), 3ಗ್ರಾಂನ ಒಂದು ಜತೆ ಪಟ್ಟೆಕಲ್ಲಿನ ಕಿವಿಯೋಲೆ, 4 ಗ್ರಾಂನ ಒಂದು ಜತೆ ಜುಮುಕಿ, ಸುಮಾರು ₹ 5 ಸಾವಿರ ಹಣ ಕಳವು ಮಾಡಿದ್ದಾರೆ. ಕಳವಾದ ಚಿನ್ನಾಭರಣದ ಮೌಲ್ಯ ₹ 1.20 ಲಕ್ಷ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಸಂಪ್ಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>