<p><strong>ಮಂಗಳೂರು:</strong> ಸೆಂಟ್ರಲ್ ರೈಲ್ವೆ ನಿಲ್ದಾಣದ ಸಮೀಪ ಇನ್ನೋವಾ ಕಾರಿನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಬಂದು ಚಿನ್ನದ ವ್ಯಾಪಾರಿಯೊಬ್ಬರನ್ನು ಬಂಧಿಸುವ ನೆಪದಲ್ಲಿ ಕುಮಟಾಕ್ಕೆ ಅಪಹರಿಸಿ, ಹೆದರಿಸಿ 350 ಗ್ರಾಂ ತೂಕದ ಶುದ್ಧ ಬಂಗಾರದ ಗಟ್ಟಿಯನ್ನು ದರೋಡೆ ಮಾಡಿದ ಪ್ರಕರಣದ ಐವರು ಆರೋಪಿಗಳನ್ನು ಇಲ್ಲಿನ ಸಿಸಿಬಿ ಪೊಲೀಸರು ಪುಣೆಯಲ್ಲಿ ಸೋಮವಾರ ವಶಕ್ಕೆ ಪಡೆದಿದ್ದಾರೆ.</p><p>ಈ ಬಗ್ಗೆ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದ ಡಿಸಿಪಿ (ಕಾನೂನು ಸುವ್ಯವಸ್ಥೆ) ಮಿಥುನ್ ಎಚ್.ಎನ್, 'ಇದೇ 13ರಂದು ಬುಧವಾರ ಬೆಳಿಗ್ಗೆ ಚಿನ್ನದ ವ್ಯಾಪಾರಿ ಭಾನುದಾಸ ಹರಿ ಥೋರಟ್ ಅವರು ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದ ಹತ್ತಿರದ ಕೈರಾಲಿ ಹೋಟೆಲ್ ಬಳಿ ಆಟೊ ರಿಕ್ಷಾಕ್ಕಾಗಿ ಕಾಯುತ್ತಿದ್ದರು. ಆಗ ಇನ್ನೋವಾ ಕಾರಿನಲ್ಲಿ ಬಂದ ಆರು ಜನ ಅಪರಿತರು, ಥೋರಟ್ ಅವರನ್ನು ಮಾತನಾಡಿಸಿ, ತಮ್ಮನ್ನು ಕಸ್ಟಮ್ಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡಿದ್ದರು. 'ನಿಮ್ಮ ವಿರುದ್ದ ದೂರು ಬಂದಿದೆ. ನಿಮ್ಮನ್ನು ವಿಚಾರಣೆ ಮಾಡಬೇಕು' ಎಂದು ತಿಳಿಸಿದ್ದರು.</p><p>'ನಮ್ಮೊಂದಿಗೆ ಬನ್ನಿ' ಎಂದು ಥೋರಟ್ ಅವರನ್ನು ಗದರಿಸಿ, ಬಲವಂತವಾಗಿ ಬಿಳಿ ಬಣ್ಣದ ಇನ್ನೋವಾ ಕಾರಿನಲ್ಲಿ ಕೂರಿಸಿಕೊಂಡಿದ್ದರು. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ ಮಾರ್ಗವಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾಕ್ಕೆ ಕರೆದೊಯ್ದಿದ್ದರು. ಅಲ್ಲಿ ಥೋರಟ್ ಅವರನ್ನು ಬೆದರಿಸಿ, ಆವರ ಬಳಿ ಇದ್ದ ಸುಮಾರು ₹35 ಲಕ್ಷ ಬೆಲೆಯ 350 ಗ್ರಾಂ ತೂಕದ ಬಂಗಾರದ ಗಟ್ಟಿಗಳನ್ನು ದರೋಡೆ ಮಾಡಿದ್ದರು. ಬಳಿಕ ಥೋರಟ್ ಅವರನ್ನು ಕುಮಟಾ ತಾಲೂಕಿನ ಶಿರಸಿ ಬಳಿಯ ಅಂತ್ರವಳ್ಳಿ ಎಂಬಲ್ಲಿ ಬಿಟ್ಟು ಪರಾರಿಯಾಗಿದ್ದರು. ಈ ಬಗ್ಗೆ ಥೋರಟ್ ಅವರು ಕುಮಟಾ ಠಾಣೆಗೆ ದೂರು ನೀಡಿದ್ದರು' ಎಂದು ತಿಳಿಸಿದರು.</p><p>'ಈ ಬಗ್ಗೆ ಕುಮಟಾ ಠಾಣೆಯಲ್ಲಿ ದಾಖಲಾದ ಎಫ್.ಐ.ಆರ್ ಅನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ದಕ್ಷಿಣ ಠಾಣೆಯಲ್ಲಿ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 310(2), 137(2), 204 ಅಡಿ ಪ್ರಕರಣ ದಾಖಲಾಗಿತ್ತು.'</p><p>'ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು, ಸಿಸಿಬಿ ಅಧಿಕಾರಿಗಳು ಮತ್ತು ಕೇಂದ್ರ ಉಪವಿಭಾಗದ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಿದ್ದರು. ತಾಂತ್ರಿಕ ಸಾಕ್ಷ್ಯಾಧಾರಗಳು ಮತ್ತು ಇತರೆ ಮಾಹಿತಿಗಳ ಆಧಾರದಲ್ಲಿ ಒಟ್ಟು ಐವರು ಆರೋಪಿಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಪತ್ತೆ ಮಾಡಲಾಗಿದೆ. ವಿಚಾರಣೆ ವೇಳೆ ಆರೋಪಿಗಳು ಈ ಕೃತ್ಯ ನಡೆಸಿದ್ದನ್ನು ಒಪ್ಪಿಕೊಂಡಿದ್ದಾರೆ. ದೋಚಿದ್ದ ಚಿನ್ನವನ್ನು ಮಾರಾಟ ಮಾಡಿದ ಬಗ್ಗೆ ಆರೋಪಿಗಳು ಮಾಹಿತಿ ನೀಡಿದ್ದಾರೆ. ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಿದ್ದೇವೆ. ದರೋಡೆ ಮಾಡಿದ್ದ ಚಿನ್ನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನು ಸ್ವಾಧೀನ ಪಡಿಸಲು ಕ್ರಮ ವಹಿಸಲಾಗಿದೆ' ಎಂದು ತಿಳಿಸಿದರು.</p><p>ಡಿಸಿಪಿ (ಅಪರಾಧ ಮತ್ತು ಸಂಚಾರ) ರವಿಶಂಕರ್ ಕೆ., ಎಸಿಪಿ (ಸೆಂಟ್ರಲ್) ಪ್ರತಾಪ್ ಸಿಂಗ್ ಥೋರಟ್ ಎಸಿಪಿ (ದಕ್ಷಿಣ) ವಿಜಯ ಕ್ರಾಂತಿ ಸುದ್ದಿಗೋಷ್ಠಿಯಲ್ಲಿದ್ದರು.</p> <p><strong>ಬ್ರ್ಯಾಂಡ್ ಉತ್ಪನ್ನದ ಸೋಗಿನಲ್ಲಿ ನಕಲಿ ಉತ್ಪನ್ನ ಮಾರಾಟ</strong></p><p><strong>ಉಳ್ಳಾಲ</strong> ಠಾಣಾ ವ್ಯಾಪ್ತಿಯ ಸ್ಪೋರ್ಟ್ಸ್ ವಿನ್ನರ್ ಮಳಿಗೆ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದೇವ್ ಸ್ಪೋರ್ಟ್ಸ್ ಸೆಂಟರ್ ಮಳಿಗೆಯಲ್ಲಿ ಕೊಸ್ಕೊ, ನಿವಿಯ ಮತ್ತು ಯೋನೆಕ್ಸ್ ಬ್ರಾಂಡ್ ಗಳ ಉತ್ಪನ್ನದ ಸೋಗಿನಲ್ಲಿ ಮಾರಾಟ ಮಾಡುತ್ತಿದ್ದ ಸುಮಾರು 300 ನಕಲಿ ಫುಟ್ ಬಾಲ್, ವಾಲಿಬಾಲ್ ಹಾಗೂ ಬ್ಯಾಡ್ಮಿಂಟನ್ ರಾಕೆಟ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಡಿಸಿಪಿ ಮಿಥುನ್ ಎನ್.ಎಚ್. ಮಾಹಿತಿ ನೀಡಿದರು.</p><p>ಬ್ರ್ಯಾಂಡ್ ಉತ್ಪನ್ನಗಳ ಸೋಗಿನಲ್ಲಿ ನಕಲಿ ಕ್ರೀಡಾ ಪರಿಕರ ಮಾರಾಟ ಮಾಡುತ್ತಿರುವ ಬಗ್ಗೆ ಬ್ರ್ಯಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ದಕ್ಷಿಣ ಭಾರತದ ಪ್ರಾದೇಶಿಕ ಮುಖ್ಯಸ್ಥ ಸ್ಟೀಫನ್ ರಾಜ್ ದೂರು ನೀಡಿದ್ದರು. ಈ ಬಗ್ಗೆ ಉಳ್ಳಾಲ ಮತ್ತು ನಗರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಸೆಂಟ್ರಲ್ ರೈಲ್ವೆ ನಿಲ್ದಾಣದ ಸಮೀಪ ಇನ್ನೋವಾ ಕಾರಿನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಬಂದು ಚಿನ್ನದ ವ್ಯಾಪಾರಿಯೊಬ್ಬರನ್ನು ಬಂಧಿಸುವ ನೆಪದಲ್ಲಿ ಕುಮಟಾಕ್ಕೆ ಅಪಹರಿಸಿ, ಹೆದರಿಸಿ 350 ಗ್ರಾಂ ತೂಕದ ಶುದ್ಧ ಬಂಗಾರದ ಗಟ್ಟಿಯನ್ನು ದರೋಡೆ ಮಾಡಿದ ಪ್ರಕರಣದ ಐವರು ಆರೋಪಿಗಳನ್ನು ಇಲ್ಲಿನ ಸಿಸಿಬಿ ಪೊಲೀಸರು ಪುಣೆಯಲ್ಲಿ ಸೋಮವಾರ ವಶಕ್ಕೆ ಪಡೆದಿದ್ದಾರೆ.</p><p>ಈ ಬಗ್ಗೆ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದ ಡಿಸಿಪಿ (ಕಾನೂನು ಸುವ್ಯವಸ್ಥೆ) ಮಿಥುನ್ ಎಚ್.ಎನ್, 'ಇದೇ 13ರಂದು ಬುಧವಾರ ಬೆಳಿಗ್ಗೆ ಚಿನ್ನದ ವ್ಯಾಪಾರಿ ಭಾನುದಾಸ ಹರಿ ಥೋರಟ್ ಅವರು ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದ ಹತ್ತಿರದ ಕೈರಾಲಿ ಹೋಟೆಲ್ ಬಳಿ ಆಟೊ ರಿಕ್ಷಾಕ್ಕಾಗಿ ಕಾಯುತ್ತಿದ್ದರು. ಆಗ ಇನ್ನೋವಾ ಕಾರಿನಲ್ಲಿ ಬಂದ ಆರು ಜನ ಅಪರಿತರು, ಥೋರಟ್ ಅವರನ್ನು ಮಾತನಾಡಿಸಿ, ತಮ್ಮನ್ನು ಕಸ್ಟಮ್ಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡಿದ್ದರು. 'ನಿಮ್ಮ ವಿರುದ್ದ ದೂರು ಬಂದಿದೆ. ನಿಮ್ಮನ್ನು ವಿಚಾರಣೆ ಮಾಡಬೇಕು' ಎಂದು ತಿಳಿಸಿದ್ದರು.</p><p>'ನಮ್ಮೊಂದಿಗೆ ಬನ್ನಿ' ಎಂದು ಥೋರಟ್ ಅವರನ್ನು ಗದರಿಸಿ, ಬಲವಂತವಾಗಿ ಬಿಳಿ ಬಣ್ಣದ ಇನ್ನೋವಾ ಕಾರಿನಲ್ಲಿ ಕೂರಿಸಿಕೊಂಡಿದ್ದರು. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ ಮಾರ್ಗವಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾಕ್ಕೆ ಕರೆದೊಯ್ದಿದ್ದರು. ಅಲ್ಲಿ ಥೋರಟ್ ಅವರನ್ನು ಬೆದರಿಸಿ, ಆವರ ಬಳಿ ಇದ್ದ ಸುಮಾರು ₹35 ಲಕ್ಷ ಬೆಲೆಯ 350 ಗ್ರಾಂ ತೂಕದ ಬಂಗಾರದ ಗಟ್ಟಿಗಳನ್ನು ದರೋಡೆ ಮಾಡಿದ್ದರು. ಬಳಿಕ ಥೋರಟ್ ಅವರನ್ನು ಕುಮಟಾ ತಾಲೂಕಿನ ಶಿರಸಿ ಬಳಿಯ ಅಂತ್ರವಳ್ಳಿ ಎಂಬಲ್ಲಿ ಬಿಟ್ಟು ಪರಾರಿಯಾಗಿದ್ದರು. ಈ ಬಗ್ಗೆ ಥೋರಟ್ ಅವರು ಕುಮಟಾ ಠಾಣೆಗೆ ದೂರು ನೀಡಿದ್ದರು' ಎಂದು ತಿಳಿಸಿದರು.</p><p>'ಈ ಬಗ್ಗೆ ಕುಮಟಾ ಠಾಣೆಯಲ್ಲಿ ದಾಖಲಾದ ಎಫ್.ಐ.ಆರ್ ಅನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ದಕ್ಷಿಣ ಠಾಣೆಯಲ್ಲಿ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 310(2), 137(2), 204 ಅಡಿ ಪ್ರಕರಣ ದಾಖಲಾಗಿತ್ತು.'</p><p>'ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು, ಸಿಸಿಬಿ ಅಧಿಕಾರಿಗಳು ಮತ್ತು ಕೇಂದ್ರ ಉಪವಿಭಾಗದ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಿದ್ದರು. ತಾಂತ್ರಿಕ ಸಾಕ್ಷ್ಯಾಧಾರಗಳು ಮತ್ತು ಇತರೆ ಮಾಹಿತಿಗಳ ಆಧಾರದಲ್ಲಿ ಒಟ್ಟು ಐವರು ಆರೋಪಿಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಪತ್ತೆ ಮಾಡಲಾಗಿದೆ. ವಿಚಾರಣೆ ವೇಳೆ ಆರೋಪಿಗಳು ಈ ಕೃತ್ಯ ನಡೆಸಿದ್ದನ್ನು ಒಪ್ಪಿಕೊಂಡಿದ್ದಾರೆ. ದೋಚಿದ್ದ ಚಿನ್ನವನ್ನು ಮಾರಾಟ ಮಾಡಿದ ಬಗ್ಗೆ ಆರೋಪಿಗಳು ಮಾಹಿತಿ ನೀಡಿದ್ದಾರೆ. ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಿದ್ದೇವೆ. ದರೋಡೆ ಮಾಡಿದ್ದ ಚಿನ್ನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನು ಸ್ವಾಧೀನ ಪಡಿಸಲು ಕ್ರಮ ವಹಿಸಲಾಗಿದೆ' ಎಂದು ತಿಳಿಸಿದರು.</p><p>ಡಿಸಿಪಿ (ಅಪರಾಧ ಮತ್ತು ಸಂಚಾರ) ರವಿಶಂಕರ್ ಕೆ., ಎಸಿಪಿ (ಸೆಂಟ್ರಲ್) ಪ್ರತಾಪ್ ಸಿಂಗ್ ಥೋರಟ್ ಎಸಿಪಿ (ದಕ್ಷಿಣ) ವಿಜಯ ಕ್ರಾಂತಿ ಸುದ್ದಿಗೋಷ್ಠಿಯಲ್ಲಿದ್ದರು.</p> <p><strong>ಬ್ರ್ಯಾಂಡ್ ಉತ್ಪನ್ನದ ಸೋಗಿನಲ್ಲಿ ನಕಲಿ ಉತ್ಪನ್ನ ಮಾರಾಟ</strong></p><p><strong>ಉಳ್ಳಾಲ</strong> ಠಾಣಾ ವ್ಯಾಪ್ತಿಯ ಸ್ಪೋರ್ಟ್ಸ್ ವಿನ್ನರ್ ಮಳಿಗೆ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದೇವ್ ಸ್ಪೋರ್ಟ್ಸ್ ಸೆಂಟರ್ ಮಳಿಗೆಯಲ್ಲಿ ಕೊಸ್ಕೊ, ನಿವಿಯ ಮತ್ತು ಯೋನೆಕ್ಸ್ ಬ್ರಾಂಡ್ ಗಳ ಉತ್ಪನ್ನದ ಸೋಗಿನಲ್ಲಿ ಮಾರಾಟ ಮಾಡುತ್ತಿದ್ದ ಸುಮಾರು 300 ನಕಲಿ ಫುಟ್ ಬಾಲ್, ವಾಲಿಬಾಲ್ ಹಾಗೂ ಬ್ಯಾಡ್ಮಿಂಟನ್ ರಾಕೆಟ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಡಿಸಿಪಿ ಮಿಥುನ್ ಎನ್.ಎಚ್. ಮಾಹಿತಿ ನೀಡಿದರು.</p><p>ಬ್ರ್ಯಾಂಡ್ ಉತ್ಪನ್ನಗಳ ಸೋಗಿನಲ್ಲಿ ನಕಲಿ ಕ್ರೀಡಾ ಪರಿಕರ ಮಾರಾಟ ಮಾಡುತ್ತಿರುವ ಬಗ್ಗೆ ಬ್ರ್ಯಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ದಕ್ಷಿಣ ಭಾರತದ ಪ್ರಾದೇಶಿಕ ಮುಖ್ಯಸ್ಥ ಸ್ಟೀಫನ್ ರಾಜ್ ದೂರು ನೀಡಿದ್ದರು. ಈ ಬಗ್ಗೆ ಉಳ್ಳಾಲ ಮತ್ತು ನಗರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>