‘ಗುಡ್ಫ್ರೈಡೆ ಪ್ರಯುಕ್ತ ಚರ್ಚ್ಗಳಲ್ಲಿ ವಿಶೇಷ ಪ್ರಾರ್ಥನೆ, ಶಿಲುಬೆಯ ಹಾದಿ (ವೆ ಆಫ್ ದಿ ಕ್ರಾಸ್), ಶಿಲುಬೆಯ ಆರಾಧನೆ ಮತ್ತು ಇತರ ಕಾರ್ಯಕ್ರಮಗಳು ನಡೆಯಲಿವೆ. ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಿ ಈ ಪವಿತ್ರ ಸಪ್ತಾಹದ ಕಾರ್ಯಕ್ರಮಗಳನ್ನು ಸರಳ ರೀತಿಯಲ್ಲಿ ನಡೆಸಲಾಗುತ್ತದೆ’ ಎಂದು ಮಂಗಳೂರು ಬಿಷಪ್ ರೆ.ಡಾ. ಪೀಟರ್ ಪಾವ್ಲ್ ಸಲ್ಡಾನ ತಿಳಿಸಿದ್ದಾರೆ.