<p><strong>ಬೆಳ್ತಂಗಡಿ</strong>: ತಾಲ್ಲೂಕಿನಲ್ಲಿ ಬುಧವಾರ ಉತ್ತಮ ಮಳೆ ಸುರಿದಿದೆ. ಬೆಳಿಗ್ಗೆ 6 ಗಂಟೆಗೆ ಆರಂಭವಾದ ಮಳೆ ಮಧ್ಯಾಹ್ನ 1 ಗಂಟೆವರೆಗೆ ಸುರಿಯಿತು. ಮಧ್ಯಾಹ್ನ ಬಿಡುವು ನೀಡಿ, ಸಂಜೆ 4 ಗಂಟೆಯಿಂದ ಮತ್ತೆ ಮುಂದುವರಿಯಿತು.</p>.<p>ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇತ್ರಾವತಿ- ಅಜೆಕುರಿ ರಸ್ತೆ ಮೇಲೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.ಮರ ಬಿದ್ದು ನಾಲ್ಕು ವಿದ್ಯುತ್ ಕಂಬಗಳು ಮುರಿದಿವೆ.</p>.<p>ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಗೋಡೆ ಭಾಗಶಃ ಕುಸಿದಿದೆ. ಪಡಂಗಡಿ ಗ್ರಾಮದ ಪೆರಣಮಂಜ ಬಳಿ ಮಹಮ್ಮದ್ ಎಂಬುವರ ಮನೆಯ ಆವರಣಗೋಡೆ ಕುಸಿದಿದೆ.</p>.<p>ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೂ ಮಳೆ ಅಡ್ಡಿಯಾಯಿತು. ತಾಲ್ಲೂಕಿನಲ್ಲಿ ಕೃಷಿಕರು ಮಳೆಗಾಲದ ಅಗತ್ಯ ಕೆಲಸಗಳನ್ನು ನಡೆಸುವ ತಯಾರಿಯಲ್ಲಿ ತೊಡಗಿದ್ದಾರೆ.</p>.<p>ನೇತ್ರಾವತಿ, ಮೃತ್ಯುಂಜಯ ನದಿಯಲ್ಲಿ ನೀರಿನ ಹರಿವು ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಿದೆ. ಹಲವೆಡೆ ಕಿಂಡಿ ಅಣೆಕಟ್ಟುಗಳ ಹಲಗೆ ತೆರವು ಕೆಲಸ ಬಾಕಿ ಇದೆ. ಸದ್ಯ ನೀರು ರಭಸವಾಗಿ ಹರಿಯುತ್ತಿದ್ದು ಕಿಂಡಿ ಅಣೆಕಟ್ಟುಗಳ ಹಲಗೆ ತೆರವುಗೊಳಿಸುವುದು ಸವಾಲಿನ ಕೆಲಸವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ</strong>: ತಾಲ್ಲೂಕಿನಲ್ಲಿ ಬುಧವಾರ ಉತ್ತಮ ಮಳೆ ಸುರಿದಿದೆ. ಬೆಳಿಗ್ಗೆ 6 ಗಂಟೆಗೆ ಆರಂಭವಾದ ಮಳೆ ಮಧ್ಯಾಹ್ನ 1 ಗಂಟೆವರೆಗೆ ಸುರಿಯಿತು. ಮಧ್ಯಾಹ್ನ ಬಿಡುವು ನೀಡಿ, ಸಂಜೆ 4 ಗಂಟೆಯಿಂದ ಮತ್ತೆ ಮುಂದುವರಿಯಿತು.</p>.<p>ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇತ್ರಾವತಿ- ಅಜೆಕುರಿ ರಸ್ತೆ ಮೇಲೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.ಮರ ಬಿದ್ದು ನಾಲ್ಕು ವಿದ್ಯುತ್ ಕಂಬಗಳು ಮುರಿದಿವೆ.</p>.<p>ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಗೋಡೆ ಭಾಗಶಃ ಕುಸಿದಿದೆ. ಪಡಂಗಡಿ ಗ್ರಾಮದ ಪೆರಣಮಂಜ ಬಳಿ ಮಹಮ್ಮದ್ ಎಂಬುವರ ಮನೆಯ ಆವರಣಗೋಡೆ ಕುಸಿದಿದೆ.</p>.<p>ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೂ ಮಳೆ ಅಡ್ಡಿಯಾಯಿತು. ತಾಲ್ಲೂಕಿನಲ್ಲಿ ಕೃಷಿಕರು ಮಳೆಗಾಲದ ಅಗತ್ಯ ಕೆಲಸಗಳನ್ನು ನಡೆಸುವ ತಯಾರಿಯಲ್ಲಿ ತೊಡಗಿದ್ದಾರೆ.</p>.<p>ನೇತ್ರಾವತಿ, ಮೃತ್ಯುಂಜಯ ನದಿಯಲ್ಲಿ ನೀರಿನ ಹರಿವು ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಿದೆ. ಹಲವೆಡೆ ಕಿಂಡಿ ಅಣೆಕಟ್ಟುಗಳ ಹಲಗೆ ತೆರವು ಕೆಲಸ ಬಾಕಿ ಇದೆ. ಸದ್ಯ ನೀರು ರಭಸವಾಗಿ ಹರಿಯುತ್ತಿದ್ದು ಕಿಂಡಿ ಅಣೆಕಟ್ಟುಗಳ ಹಲಗೆ ತೆರವುಗೊಳಿಸುವುದು ಸವಾಲಿನ ಕೆಲಸವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>