ದ್ವಿಪಥ ಮಾರ್ಗವಿರುವ ಈ ಸ್ಥಳದಲ್ಲಿ ಭಾರಿ ಪ್ರಮಾಣದ ಮಣ್ಣು ಕುಸಿದಿದ್ದರಿಂದ ಪ್ರಯಾಣಿಕ ರೈಲು ಹಾಗೂ ಗೂಡ್ಸ್ ರೈಲುಗಳ ಮಾರ್ಗವನ್ನು ಬದಲಿಸಲಾಗಿತ್ತು. ದಕ್ಷಿಣ ರೈಲ್ವೆ ಪಾಲ್ಘಾಟ್ ವಿಭಾಗದ ಅಧಿಕಾರಿಗಳ ನೇತೃತ್ವದಲ್ಲಿ ಸಿಬ್ಬಂದಿ, ಹಿಟಾಚಿ, ಜೆಸಿಬಿ ಬಳಸಿ 2–3 ದಿನಗಳಿಂದ ಮಣ್ಣು ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ.