ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ: ಅಡಿಕೆ ಆದಾಯದಲ್ಲಿ ಬಸ್‌ ಖರೀದಿಸಿದ ಸರ್ಕಾರಿ ಶಾಲೆ

Last Updated 12 ಸೆಪ್ಟೆಂಬರ್ 2022, 15:34 IST
ಅಕ್ಷರ ಗಾತ್ರ

ವಿಟ್ಲ: ಸಮೀಪದ ಮಿತ್ತೂರು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು, ತನ್ನ ಅಡಿಕೆ ತೋಟದ ಆದಾಯದಿಂದ ಬಸ್‌ ಸೌಲಭ್ಯ ಹೊಂದಿದೆ.

112 ವರ್ಷಗಳ ಇತಿಹಾಸ ಇರುವ ಈ ಶಾಲೆ ಸುಮಾರು 4 ಎಕರೆ ಜಮೀನು ಹೊಂದಿದೆ. ಎಸ್‌ಡಿಎಂಸಿಯವರು, ಶಿಕ್ಷಕರು ಹಾಗೂ ಗ್ರಾಮಸ್ಥರು ಸೇರಿ 2017ರಲ್ಲಿ ಇಲ್ಲಿ 628 ಅಡಿಕೆ ಸಸಿಗಳನ್ನು ನೆಟ್ಟು, ಬೆಳೆಸಿದ್ದಾರೆ. ಈಗ ಅಡಿಕೆ ಇಳುವರಿ ಬರುತ್ತಿದೆ. ಈ ತೋಟದ ನಿರ್ವಹಣೆಯನ್ನು ಗುತ್ತಿಗೆ ನೀಡಲಾಗಿದ್ದು, ಇದರಿಂದ ಶಾಲೆಗೆ ವಾರ್ಷಿಕ ₹2.50 ಲಕ್ಷ ಆದಾಯ ಲಭಿಸುತ್ತಿದೆ.

ಈ ಆದಾಯದಲ್ಲಿ 26 ಆಸನಗಳ ಬಸ್‌ ಖರೀದಿಸಲಾಗಿದ್ದು, ಮಕ್ಕಳನ್ನು ಶಾಲೆಗೆ ಕರೆತರಲು ಈ ಬಸ್‌ ಬಳಸಲಾಗುತ್ತಿದೆ. ಈ ತೋಟದ ಆದಾಯದಿಂದಲೇ ಬಸ್‌ನ ನಿರ್ವಹಣಾ ವೆಚ್ಚವನ್ನು ಎಸ್‌ಡಿಎಂಸಿ ಭರಿಸಲಿದೆ.

ಶಾಸಕ ಸಂಜೀವ ಮಠಂದೂರು ಅವರು ಈ ಬಸ್‌ ಸೇವೆಗೆ ಈಚೆಗೆ ಚಾಲನೆ ನೀಡಿ, ಗ್ರಾಮಸ್ಥರು, ಶಾಲೆಯ ಶಿಕ್ಷಕರು ಹಾಗೂ ಎಸ್‌ಡಿಎಂಸಿಯ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲೆಗೆ ಕೊಠಡಿ ಮಂಜೂರು ಮಾಡಲಾಗಿದ್ದು ಹೆಚ್ಚುವರಿ ಒಂದು ಕೊಠಡಿ ಹಾಗೂ ಕಾಂಕ್ರೀಟ್ ರಸ್ತೆಯನ್ನು ಮುಂದಿನ ದಿನಗಳಲ್ಲಿ ಮಂಜೂರು ಮಾಡಲಾಗುವುದು ಎಂದರು.

ಇಡ್ಕಿದು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಸುಧೀರ್ ಕುಮಾರ್ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಆದಂ ಎಂ.ಎಂ.ಎಸ್., ಉಪಾಧ್ಯಕ್ಷೆ ಮಲ್ಲಿಕಾ ತಾರನಾಥ, ಮುಖ್ಯ ಶಿಕ್ಷಕಿ ಸರೋಜಾ ಎ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT