ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿಗೆ ಆಸರೆಯಾದ ಗ್ರಾ.ಪಂ

ವಾಸ್ತವ್ಯದ ಗುಡಿಸಲು ಕುಸಿದು ಅತಂತ್ರವಾಗಿದ್ದ ಬಡ ಕುಟುಂಬ
Last Updated 1 ಜುಲೈ 2021, 4:29 IST
ಅಕ್ಷರ ಗಾತ್ರ

ಪುತ್ತೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ ಘೋಷಣೆ ಮಾಡಿದ ದಿನವೇ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ವಾಸ್ತವ್ಯದ ಮನೆಯ ಒಂದು ಭಾಗ ಕುಸಿದಿದೆ. ಇದರಿಂದ ಈ ಬಡ ಕುಟುಂಬಕ್ಕೆ ದಿಕ್ಕುತೋಚದಾಗಿತ್ತು. ಇದಕ್ಕೆ ಸ್ಪಂದಿಸಿರುವ ಜನಪ್ರತಿನಿಧಿಗಳು ಈ‌ ಕುಟುಂಬಕ್ಕೆ ಆಸರೆಯಾದರು.

ನಗರದ ಹೊರವಲಯದ ಬನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬುರ್ಗ ಎಂಬಲ್ಲಿ ವಾಸವಿರುವ ಗೋಪಾಲ ಶೆಟ್ಟಿ ಅವರದ್ದು ತೀರಾ ಬಡ ಕುಟುಂಬ. ಕುಸಿಯುವ ಹಂತದಲ್ಲಿರುವ ಹೆಂಚಿನ ಮಾಡಿಗೆ ಪ್ಲಾಸ್ಟಿಕ್ ಹೊದಿಕೆ ಮಾಡಿದ ಜೋಪಡಿಯಲ್ಲಿ ಈ ಕುಟುಂಬ ನೆಲೆಸಿತ್ತು. ದುಡಿಯ
ಲಾಗದೆ ಅಸಹಾಯಕ ಸ್ಥಿತಿಯಲ್ಲಿರುವ ಯಜಮಾನ, ಪತ್ನಿ ಶಾರದಾ ಬೀಡಿ ಸುತ್ತಿ ಇಬ್ಬರು ಮಕ್ಕಳ ವಿದ್ಯಾಭ್ಯಾಸ, ಮನೆ ನಿರ್ವಹಣೆ ಮಾಡುತ್ತಿದ್ದರು.

ಮನೆಯಲ್ಲಿ ಓದು ಕಷ್ಟವಾಗುವ ಕಾರಣ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯಾಗಿದ್ದ ದೀಕ್ಷಾ ಮಾವನ ಮನೆಯಲ್ಲಿ ಉಳಿದು ಶಿಕ್ಷಣ ಪಡೆಯುತ್ತಿದ್ದಳು. ಆನ್‌ಲೈನ್ ತರಗತಿ ಕಾರಣ ಮನೆಗೆ ಬಂದು ಪರೀಕ್ಷೆ ಸಿದ್ಧತೆಯಲ್ಲಿದ್ದಳು. ಓದಿನ ನಡುವೆ, ಮನೆ ಪೂರ್ಣ ಕುಸಿದರೆ ಎಂಬ ಆತಂಕ ಅವಳನ್ನು ಕಾಡುತ್ತಿತ್ತು. ಅದನ್ನು ಅನೇಕರ ಬಳಿ ಹೇಳಿಕೊಂಡಿದ್ದಳು. ಅವಳ ಧ್ವನಿಗೆ ಸ್ಪಂದನೆ ದೊರೆತಿದೆ.

ಬನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಾ ರಮೇಶ್ ಹಾಗೂ ತಂಡದವರು ಈ ವಿದ್ಯಾರ್ಥಿನಿ ಹಾಗೂ ಕುಟುಂಬದವನ್ನು ಗ್ರಾಮ ಪಂಚಾಯಿತಿ ಸಭಾಭವನಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಿದ್ದಾರೆ. ಪಂಚಾಯಿತಿ ಮೂಲಕ ಮನೆ ದುರಸ್ತಿ ಮಾಡಿಕೊಡುವ ಭರವಸೆ ನೀಡಿದ್ದಾರೆ. ಅಲ್ಲಿಯವರೆಗೆ ಸಮೀಪದಲ್ಲಿರುವ ಬಾಡಿಗೆ ಮನೆಯನ್ನು ಗೊತ್ತುಪಡಿಸಿ, ಪಂಚಾಯಿತಿ ವತಿಯಿಂದ ಬಾಡಿಗೆ ನೀಡಲು ನಿರ್ಧರಿಸಿದ್ದಾರೆ.

‘ನಮ್ಮ ವಾಸ್ತವ್ಯಕ್ಕೆ ವ್ಯವಸ್ಥೆ’

‘ಶಾಸಕ ಸಂಜೀವ ಮಠಂದೂರು ಅವರು ಮಂಗಳವಾರ ಸಂಜೆ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿದರು. ‘ನಮ್ಮ ನೋವನ್ನು ಅವರ ಬಳಿ ಹೇಳಿಕೊಂಡಿದ್ದೇವೆ. ಅವರು ನಮಗೆ ಹೊಸ ಮನೆಯನ್ನು ಒದಗಿಸುವ ಭರವಸೆ ನೀಡಿದ್ದಾರೆ. ಬನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಾ ರಮೇಶ್ ಮತ್ತು ಸದಸ್ಯರು ಬಾಡಿಗೆ ಮನೆಯನ್ನು ಗೊತ್ತುಪಡಿಸಿ ನಮ್ಮ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದಾರೆ’ ಎಂದು ವಿದ್ಯಾರ್ಥಿನಿ ದೀಕ್ಷಾ ಪ್ರತಿಕ್ರಿಯಿಸಿದ್ದಾಳೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT