<p><strong>ಮಂಗಳೂರು:</strong> ‘ಸಿಟಿ ಬಸ್ಗಳಿಗೆ 15 ದಿನಗಳ ಒಳಗೆ ಜಿಪಿಎಸ್ ಅಳವಡಿಕೆ ಕಡ್ಡಾಯ. ತಪ್ಪಿದ್ದಲ್ಲಿ ಅಂತಹ ಬಸ್ಗಳ ಪರವಾನಗಿ ರದ್ದುಪಡಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಎಚ್ಚರಿಕೆ ನೀಡಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>’ಸಿಟಿ ಬಸ್ಗಳಿಗೆ ಜಿಪಿಎಸ್ ಅಳವಡಿಸುವಂತೆ ಈಗಾಗಲೇ ಹಲವು ಬಾರಿ ಸೂಚನೆ ನೀಡಲಾಗಿದೆ. ಇನ್ನು ಗಡುವು ವಿಸ್ತರಿಸಲು ಸಾಧ್ಯವೇ ಇಲ್ಲ. 15 ದಿನಗಳ ಒಳಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದರು.</p>.<p>’ಮಂಗಳೂರು ನಗರದಲ್ಲಿ ಒಟ್ಟು 320 ಸಿಟಿ ಬಸ್ಗಳಿವೆ. ಅವುಗಳಲ್ಲಿ 70 ಬಸ್ಗಳಿಗೆ ಮಾತ್ರ ಜಿಪಿಎಸ್ ಅಳವಡಿಸಲಾಗಿದೆ’ ಎಂದು ಸಾರಿಗೆ ಅಧಿಕಾರಿ ಮಾಹಿತಿ ನೀಡಿದರು.</p>.<p>’ಜಿಪಿಎಸ್ ಅಳವಡಿಸುವ ಕುರಿತು ಈಗಾಗಲೇ ಬಸ್ ಮಾಲೀಕರಿಗೆ ಮಾಹಿತಿ ನೀಡಲಾಗಿದೆ’ ಎಂದು ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ರಾಜ್ ಆಳ್ವ ಹೇಳಿದರು.</p>.<p>‘ನಗರದಲ್ಲಿ ಸಂಚರಿಸುವ ವಾಹನಗಳ ವರ್ಷವಾರು ಪಟ್ಟಿಯನ್ನು ಸಾರಿಗೆ ಇಲಾಖೆ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು. 5 ರಿಂದ 10 ವರ್ಷದೊಳಗಿನ ಮತ್ತು 10 ರಿಂದ 15 ವರ್ಷದೊಳಗಿನ ವಾಹನಗಳು ಎಷ್ಟಿವೆ ಎಂಬ ಮಾಹಿತಿಯನ್ನು ನೀಡಬೇಕು. ವಾಹನಗಳಿಗೆ ಕ್ಷಮತಾ ಪತ್ರ ನೀಡುವಾಗ ಎಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.</p>.<p>ಮಂಗಳೂರು ಆರ್ಟಿಒ ವರ್ಣೇಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಮಹಾನಗರ ಪಾಲಿಕೆ ಉಪ ಆಯುಕ್ತ ಸಂತೋಷ್ ಕುಮಾರ್ ಇದ್ದರು.</p>.<p>ಆಟೊ ರಿಕ್ಷಾ ಪರವಾನಗಿ ನವೀಕರಣ, ಹೊಸ ರಿಕ್ಷಾ ಖರೀದಿಗೆ ಪರವಾನಗಿ ಸೇರಿದಂತೆ ಆಟೊ ರಿಕ್ಷಾ ಚಾಲಕರ ಸಮಸ್ಯೆಗಳ ಕುರಿತು ಸಾರಿಗೆ ಇಲಾಖೆ ಪೊಲೀಸ್ ಅಧಿಕಾರಿಗಳ ಸಮಕ್ಷಮದಲ್ಲಿ ಸಭೆ ನಡೆಸಬೇಕು<br />ಡಾ.ಕೆ.ವಿ ರಾಜೇಂದ್ರ, ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಸಿಟಿ ಬಸ್ಗಳಿಗೆ 15 ದಿನಗಳ ಒಳಗೆ ಜಿಪಿಎಸ್ ಅಳವಡಿಕೆ ಕಡ್ಡಾಯ. ತಪ್ಪಿದ್ದಲ್ಲಿ ಅಂತಹ ಬಸ್ಗಳ ಪರವಾನಗಿ ರದ್ದುಪಡಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಎಚ್ಚರಿಕೆ ನೀಡಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>’ಸಿಟಿ ಬಸ್ಗಳಿಗೆ ಜಿಪಿಎಸ್ ಅಳವಡಿಸುವಂತೆ ಈಗಾಗಲೇ ಹಲವು ಬಾರಿ ಸೂಚನೆ ನೀಡಲಾಗಿದೆ. ಇನ್ನು ಗಡುವು ವಿಸ್ತರಿಸಲು ಸಾಧ್ಯವೇ ಇಲ್ಲ. 15 ದಿನಗಳ ಒಳಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದರು.</p>.<p>’ಮಂಗಳೂರು ನಗರದಲ್ಲಿ ಒಟ್ಟು 320 ಸಿಟಿ ಬಸ್ಗಳಿವೆ. ಅವುಗಳಲ್ಲಿ 70 ಬಸ್ಗಳಿಗೆ ಮಾತ್ರ ಜಿಪಿಎಸ್ ಅಳವಡಿಸಲಾಗಿದೆ’ ಎಂದು ಸಾರಿಗೆ ಅಧಿಕಾರಿ ಮಾಹಿತಿ ನೀಡಿದರು.</p>.<p>’ಜಿಪಿಎಸ್ ಅಳವಡಿಸುವ ಕುರಿತು ಈಗಾಗಲೇ ಬಸ್ ಮಾಲೀಕರಿಗೆ ಮಾಹಿತಿ ನೀಡಲಾಗಿದೆ’ ಎಂದು ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ರಾಜ್ ಆಳ್ವ ಹೇಳಿದರು.</p>.<p>‘ನಗರದಲ್ಲಿ ಸಂಚರಿಸುವ ವಾಹನಗಳ ವರ್ಷವಾರು ಪಟ್ಟಿಯನ್ನು ಸಾರಿಗೆ ಇಲಾಖೆ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು. 5 ರಿಂದ 10 ವರ್ಷದೊಳಗಿನ ಮತ್ತು 10 ರಿಂದ 15 ವರ್ಷದೊಳಗಿನ ವಾಹನಗಳು ಎಷ್ಟಿವೆ ಎಂಬ ಮಾಹಿತಿಯನ್ನು ನೀಡಬೇಕು. ವಾಹನಗಳಿಗೆ ಕ್ಷಮತಾ ಪತ್ರ ನೀಡುವಾಗ ಎಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.</p>.<p>ಮಂಗಳೂರು ಆರ್ಟಿಒ ವರ್ಣೇಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಮಹಾನಗರ ಪಾಲಿಕೆ ಉಪ ಆಯುಕ್ತ ಸಂತೋಷ್ ಕುಮಾರ್ ಇದ್ದರು.</p>.<p>ಆಟೊ ರಿಕ್ಷಾ ಪರವಾನಗಿ ನವೀಕರಣ, ಹೊಸ ರಿಕ್ಷಾ ಖರೀದಿಗೆ ಪರವಾನಗಿ ಸೇರಿದಂತೆ ಆಟೊ ರಿಕ್ಷಾ ಚಾಲಕರ ಸಮಸ್ಯೆಗಳ ಕುರಿತು ಸಾರಿಗೆ ಇಲಾಖೆ ಪೊಲೀಸ್ ಅಧಿಕಾರಿಗಳ ಸಮಕ್ಷಮದಲ್ಲಿ ಸಭೆ ನಡೆಸಬೇಕು<br />ಡಾ.ಕೆ.ವಿ ರಾಜೇಂದ್ರ, ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>