<p>ಮಂಗಳೂರು: ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ ಮೀನುಗಾರಿಕಾ ದೋಣಿಗಳ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ 13 ಮರಳು ದಿಬ್ಬಗಳನ್ನು ತೆರವುಗೊಳಿಸಲು 80 ತಾತ್ಕಾಲಿಕ ಪರವಾನಗಿ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.</p>.<p>ಈ ಮರಳು ದಿಬ್ಬಗಳನ್ನು ತೆರವುಗೊಳಿಸಲು ಬಳಸುವ ದೋಣಿಗಳಿಗೆ ಹಾಗೂ ಮರಳು ಸಾಗಣೆ ವಾಹನಗಳಿಗೆ ಕಿಯೋನಿಕ್ಸ್ ನಿಗದಿಪಡಿಸಿದ ಸಂಸ್ಥೆಯಿಂದ ಜಿಪಿಎಸ್ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಜಿಪಿಎಸ್ ಅಳವಡಿಸಿದ ಬಗ್ಗೆ ದಾಖಲೆಯನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.</p>.<p>ಮರಳು ಸಾಗಣೆ ಮಾಡುವ ವಾಹನಗಳನ್ನು ‘ಸ್ಯಾಂಡ್ ಬಜಾರ್ ಆ್ಯಪ್’ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ಮರಳು ಸಾಗಣೆ ಮಾಡಲು ಇಚ್ಛಿಸುವ ವಾಹನಗಳ ಮಾಲೀಕರು, ತಾತ್ಕಾಲಿಕ ಪರವಾನಗಿದಾರರು ಮಲ್ಲಿಕಟ್ಟೆಯಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು ಎಂದು ಹೇಳಿದ್ದಾರೆ.</p>.<p>ಮರಳು ಪೂರೈಕೆಗಾಗಿ ‘ಸ್ಯಾಂಡ್ ಬಜಾರ್ ಆ್ಯಪ್’ ಅನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಬಿಡುಗಡೆ ಮಾಡಲಾಯಿತು. ‘ಸ್ಯಾಂಡ್ ಬಜಾರ್ ಆ್ಯಪ್’ ಸಹಾಯದಿಂದ ಗ್ರಾಹಕರು, ಸಾರ್ವಜನಿಕರು ಮರಳನ್ನು ಪಡೆಯಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ ಮೀನುಗಾರಿಕಾ ದೋಣಿಗಳ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ 13 ಮರಳು ದಿಬ್ಬಗಳನ್ನು ತೆರವುಗೊಳಿಸಲು 80 ತಾತ್ಕಾಲಿಕ ಪರವಾನಗಿ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.</p>.<p>ಈ ಮರಳು ದಿಬ್ಬಗಳನ್ನು ತೆರವುಗೊಳಿಸಲು ಬಳಸುವ ದೋಣಿಗಳಿಗೆ ಹಾಗೂ ಮರಳು ಸಾಗಣೆ ವಾಹನಗಳಿಗೆ ಕಿಯೋನಿಕ್ಸ್ ನಿಗದಿಪಡಿಸಿದ ಸಂಸ್ಥೆಯಿಂದ ಜಿಪಿಎಸ್ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಜಿಪಿಎಸ್ ಅಳವಡಿಸಿದ ಬಗ್ಗೆ ದಾಖಲೆಯನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.</p>.<p>ಮರಳು ಸಾಗಣೆ ಮಾಡುವ ವಾಹನಗಳನ್ನು ‘ಸ್ಯಾಂಡ್ ಬಜಾರ್ ಆ್ಯಪ್’ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ಮರಳು ಸಾಗಣೆ ಮಾಡಲು ಇಚ್ಛಿಸುವ ವಾಹನಗಳ ಮಾಲೀಕರು, ತಾತ್ಕಾಲಿಕ ಪರವಾನಗಿದಾರರು ಮಲ್ಲಿಕಟ್ಟೆಯಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು ಎಂದು ಹೇಳಿದ್ದಾರೆ.</p>.<p>ಮರಳು ಪೂರೈಕೆಗಾಗಿ ‘ಸ್ಯಾಂಡ್ ಬಜಾರ್ ಆ್ಯಪ್’ ಅನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಬಿಡುಗಡೆ ಮಾಡಲಾಯಿತು. ‘ಸ್ಯಾಂಡ್ ಬಜಾರ್ ಆ್ಯಪ್’ ಸಹಾಯದಿಂದ ಗ್ರಾಹಕರು, ಸಾರ್ವಜನಿಕರು ಮರಳನ್ನು ಪಡೆಯಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>