<p><strong>ಮಂಗಳೂರು:</strong> ನಗರದ ನ್ಯಾಯಾಲಯ ಸಂಕೀರ್ಣದ ಆವರಣದ ಗೋಡೆ ಹಾಗೂ ಕದ್ರಿಯಲ್ಲಿರುವ ಸರ್ಕ್ಯೂಟ್ ಹೌಸ್ನಿಂದ ಕೆಳಗಡೆ ಹೋಗುವ ರಸ್ತೆ ಬದಿಯಲ್ಲಿನ ಅಪಾರ್ಟ್ಮೆಂಟ್ನ ಕಾಂಪೌಂಡ್ ಗೋಡೆ ಮೇಲೆ ಕಂಡು ಬಂದ ವಿವಾದಿತ ಬರಹಗಳ ಕೃತ್ಯವನ್ನು ಒಂದೇ ತಂಡ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಎರಡೂ ವಿವಾದಿತ ಬರಹಗಳಲ್ಲಿ ಸಾಮ್ಯತೆ ಕಂಡುಬಂದಿದೆ. ಅಕ್ಷರ ವಿನ್ಯಾಸ, ಬರವಣಿಗೆ ಶೈಲಿಯು ಒಂದೇ ವ್ಯಕ್ತಿ ಬರೆದಿರುವ ಬಗ್ಗೆ ಶಂಕೆ ಮೂಡಿಸಿದೆ. ಎರಡೂ ಕಡೆಗಳಲ್ಲಿ ಬರೆಯಲು ಕಪ್ಪು ಬಣ್ಣದ ಸ್ಪ್ರೇ ಬಳಕೆ ಮಾಡಿರುವುದು ಸಂಶಯವನ್ನು ಪುಷ್ಟೀಕರಿಸಿದೆ.</p>.<p>ತನಿಖೆಗಾಗಿ ಪೊಲೀಸರ ಮೂರು ತಂಡಗಳನ್ನು ರಚಿಸಲಾಗಿತ್ತು. ಆದರೆ, ಎರಡೂ ಕೃತ್ಯಗಳು ಒಂದೇ ತಂಡದಿಂದ ನಡೆದಿರುವ ಶಂಕೆಯ ಹಿನ್ನೆಲೆಯಲ್ಲಿ ಬಂದರು ಠಾಣೆಯ ಮತ್ತೊಂದು ತನಿಖಾ ತಂಡವನ್ನು ರಚಿಸಲಾಗಿದೆ. ಈ ನಾಲ್ಕೂ ಪೊಲೀಸ್ ತಂಡಗಳಿಗೆ ಎರಡೂ ಪ್ರಕರಣದ ಹೊಣೆಯನ್ನು ನೀಡಲಾಗಿದೆ.</p>.<p>ನ್ಯಾಯಾಲಯದ ಆವರಣದ ಸಿಸಿಟಿವಿ ಫೂಟೇಜ್ನಲ್ಲಿ ಕಿಡಿಗೇಡಿಗಳ ಚಹರೆ ಅಸ್ಪಷ್ಟವಾಗಿ ದಾಖಲಾಗಿದೆ. ಆದರೆ, ಕದ್ರಿಯಲ್ಲಿ ಫೂಟೇಜ್ ಇದಕ್ಕಿಂತ ಸ್ಪಷ್ಟವಾಗಿದೆ. ಈ ಕೃತ್ಯದಲ್ಲಿ ಎಷ್ಟು ಮಂದಿ ಭಾಗಿಯಾಗಿದ್ದಾರೆ ಎಂಬಿತ್ಯಾದಿ ಮಾಹಿತಿ ಇನ್ನೂ ದೃಢಪಟ್ಟಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಸತತ ಎರಡು ಘಟನೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್ ಗಸ್ತು ಹೆಚ್ಚಿಸಲಾಗಿದೆ. ರಾತ್ರಿ ವೇಳೆ ನಿಗಾ ವಹಿಸಲು ಠಾಣೆಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ನಗರದ ನ್ಯಾಯಾಲಯ ಸಂಕೀರ್ಣದ ಆವರಣದ ಗೋಡೆ ಹಾಗೂ ಕದ್ರಿಯಲ್ಲಿರುವ ಸರ್ಕ್ಯೂಟ್ ಹೌಸ್ನಿಂದ ಕೆಳಗಡೆ ಹೋಗುವ ರಸ್ತೆ ಬದಿಯಲ್ಲಿನ ಅಪಾರ್ಟ್ಮೆಂಟ್ನ ಕಾಂಪೌಂಡ್ ಗೋಡೆ ಮೇಲೆ ಕಂಡು ಬಂದ ವಿವಾದಿತ ಬರಹಗಳ ಕೃತ್ಯವನ್ನು ಒಂದೇ ತಂಡ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಎರಡೂ ವಿವಾದಿತ ಬರಹಗಳಲ್ಲಿ ಸಾಮ್ಯತೆ ಕಂಡುಬಂದಿದೆ. ಅಕ್ಷರ ವಿನ್ಯಾಸ, ಬರವಣಿಗೆ ಶೈಲಿಯು ಒಂದೇ ವ್ಯಕ್ತಿ ಬರೆದಿರುವ ಬಗ್ಗೆ ಶಂಕೆ ಮೂಡಿಸಿದೆ. ಎರಡೂ ಕಡೆಗಳಲ್ಲಿ ಬರೆಯಲು ಕಪ್ಪು ಬಣ್ಣದ ಸ್ಪ್ರೇ ಬಳಕೆ ಮಾಡಿರುವುದು ಸಂಶಯವನ್ನು ಪುಷ್ಟೀಕರಿಸಿದೆ.</p>.<p>ತನಿಖೆಗಾಗಿ ಪೊಲೀಸರ ಮೂರು ತಂಡಗಳನ್ನು ರಚಿಸಲಾಗಿತ್ತು. ಆದರೆ, ಎರಡೂ ಕೃತ್ಯಗಳು ಒಂದೇ ತಂಡದಿಂದ ನಡೆದಿರುವ ಶಂಕೆಯ ಹಿನ್ನೆಲೆಯಲ್ಲಿ ಬಂದರು ಠಾಣೆಯ ಮತ್ತೊಂದು ತನಿಖಾ ತಂಡವನ್ನು ರಚಿಸಲಾಗಿದೆ. ಈ ನಾಲ್ಕೂ ಪೊಲೀಸ್ ತಂಡಗಳಿಗೆ ಎರಡೂ ಪ್ರಕರಣದ ಹೊಣೆಯನ್ನು ನೀಡಲಾಗಿದೆ.</p>.<p>ನ್ಯಾಯಾಲಯದ ಆವರಣದ ಸಿಸಿಟಿವಿ ಫೂಟೇಜ್ನಲ್ಲಿ ಕಿಡಿಗೇಡಿಗಳ ಚಹರೆ ಅಸ್ಪಷ್ಟವಾಗಿ ದಾಖಲಾಗಿದೆ. ಆದರೆ, ಕದ್ರಿಯಲ್ಲಿ ಫೂಟೇಜ್ ಇದಕ್ಕಿಂತ ಸ್ಪಷ್ಟವಾಗಿದೆ. ಈ ಕೃತ್ಯದಲ್ಲಿ ಎಷ್ಟು ಮಂದಿ ಭಾಗಿಯಾಗಿದ್ದಾರೆ ಎಂಬಿತ್ಯಾದಿ ಮಾಹಿತಿ ಇನ್ನೂ ದೃಢಪಟ್ಟಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಸತತ ಎರಡು ಘಟನೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್ ಗಸ್ತು ಹೆಚ್ಚಿಸಲಾಗಿದೆ. ರಾತ್ರಿ ವೇಳೆ ನಿಗಾ ವಹಿಸಲು ಠಾಣೆಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>