ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿವಿಧ ಜಾತಿಯ ಸುಮಾರು 2,000 ಗಿಡಗಳನ್ನು ಕ್ಷೇತ್ರದಾದ್ಯಂತ ನೆಡಲಾಗುವುದು. 14 ಕಡೆಗಳಲ್ಲಿ 14 ಗಣ್ಯರು ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸುವರು. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ ಸಚಿವ ಎಸ್.ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಸಂಜೀವ ಮಠಂದೂರು, ಹರೀಶ್ ಪೂಂಜ, ರಾಜೇಶ್ ನಾಯಕ್, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ರಾಜ್ಯ ಮುಜರಾಯಿ ಆಯುಕ್ತೆ ರೋಹಿಣಿ ಸಿಂಧೂರಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್, ಸಂಘ–ಸಂಸ್ಥೆ ಪ್ರತಿನಿಧಿಗಳು ಭಾಗವಹಿಸುವರು’ ಎಂದರು.