ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಪ್ರಾದೇಶಿಕ ಅಧಿಕಾರಿ, ಬೆಂಗಳೂರಿನಲ್ಲಿರುವ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಕರ್ನಾಟಕ ಮೀನುಗಾರಿಕಾ ನಿರ್ದೇಶಕರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಮಿತಿಯ ಸದಸ್ಯರಾಗಿದ್ದಾರೆ. ಈ ಸಮಿತಿಯು ಎರಡು ವಾರಗಳಲ್ಲಿ ಸಭೆ ನಡೆಸಿ, ಸ್ಥಳಕ್ಕೆ ಭೇಟಿ ನೀಡಬೇಕು, ಸ್ಥಳೀಯರೊಂದಿಗೆ ಚರ್ಚಿಸಿ, ಮಾಲಿನ್ಯದ ಕಾರಣಗಳನ್ನು ಪತ್ತೆ ಹಚ್ಚಿ, ಪರಿಹಾರ ಕ್ರಮಕ್ಕೆ ಸೂಚಿಸಬೇಕು. ಸ್ಥಳ ಪರಿಶೀಲನೆಯ ವೇಳೆ ನಿರ್ದಿಷ್ಟ ಕೈಗಾರಿಕೆಯಿಂದ ನದಿ ನೀರು ಮಲಿನಗೊಳ್ಳುತ್ತಿರುವುದು ಕಂಡ ಬಂದಲ್ಲಿ ನೋಟಿಸ್ ಜಾರಿಗೊಳಿಸಬೇಕು ಮತ್ತು ನ್ಯಾಯಮಂಡಳಿಗೆ ವಿಷಯ ತಿಳಿಸಬೇಕು. ಸಮಿತಿ ಕೈಗೊಂಡಿರುವ ವರದಿ ಬಗ್ಗೆ ಎರಡು ತಿಂಗಳುಗಳ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಿರುವ ಹಸಿರು ನ್ಯಾಯಮಂಡಳಿಯ ಪೀಠವು, ಮುಂದಿನ ವಿಚಾರಣೆಯನ್ನು ಆಗಸ್ಟ್ 1ಕ್ಕೆ ಮುಂದೂಡಿದೆ.