ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ದಿನ ಈ ಘಟನೆ ನಡೆದಿದೆ. ಮಂಜೇಶ್ವರ ತಾಲ್ಲೂಕಿನ ಉಪ್ಪಳದ ಉಮರುಲ್ ಭಾಷಿತ್ ಎಂಬ ಯುವಕನ ಜೊತೆ ಅಝೀಝ್ ಪುತ್ರಿಯ ವಿವಾಹ ನಡೆದಿತ್ತು. ಇದರ ಔತಣಕೂಟವನ್ನು ಬುಧವಾರ ರಾತ್ರಿ ಆಯೋಜಿಸಲಾಗಿತ್ತು. ವರನು ತನ್ನ ಸ್ನೇಹಿತರೊಂದಿಗೆ ರಾತ್ರಿ ವದುವಿನ ಮನೆಗೆ ಬಂದಾಗ, ವದುವಿನ ಮನೆಯ ಮುಂಭಾಗದ ರಸ್ತೆಯಲ್ಲಿ ಕೊರಗಜ್ಜನ ವೇಷಧರಿಸಿ, ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ, ಮುಖಕ್ಕೆ ಮಸಿ ಬಳಿಕೊಂಡು ಹಾಡು ಹೇಳಿ ಕುಣಿಯುತ್ತಾ ಬಂದಿದ್ದ ಎನ್ನಲಾಗಿದೆ. ಈ ದೃಶ್ಯವನ್ನು ವರನ ಕಡೆಯವರೊಬ್ಬರು ಸೆರೆ ಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಘಟನೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.