<p><strong>ಮಂಗಳೂರು</strong>: ‘ಗೃಹಲಕ್ಷ್ಮೀ ಮತ್ತಿತರ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ 1,44, 056 ಮಂದಿ ಮೃತಪಟ್ಟ ಬಳಿಕವೂ ಅವರ ಖಾತೆಗೆ ಸುಮಾರು ₹ 68 ಲಕ್ಷ ಜಮೆ ಆಗಿದೆ’ ಎಂದು ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಇಲ್ಲಿ ತಿಳಿಸಿದರು. </p>.<p>ದಕ್ಷಿಣಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತ ಕಾರ್ಯಾಗಾರ, ಪ್ರಗತಿ ಪರಿಶೀಲನಾ ಸಭೆ ಹಾಗೂ ಮಾದಕನಶೆಮುಕ್ತ ಕರ್ನಾಟಕ ಅಭಿಯಾನವನ್ನು ಇಲ್ಲಿ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. </p>.<p>‘ನೇರ ನಗದು ಪಾವತಿ ವ್ಯವಸ್ಥೆ ಇರುವುದರಿಂದ ಫಲಾನುಭವಿಗಳು ಮೃತಪಟ್ಟ ಬಳಿಕವೂ ಅವರ ಖಾತೆಗೆ ಹಣ ಜಮೆ ಆಗಿದೆ. ಆ ಹಣ ಜನರದ್ದು. ಹಾಗಾಗಿ ಅದನ್ನು ಹಿಂಪಡೆಯಲು ಪ್ರಯತ್ನ ನಡೆದಿದೆ’ ಎಂದರು. </p>.<p>‘ಕಟ್ಟಕಡೆಯ ಫಲಾನುಭವಿಗೂ ಯೋಜನೆಗಳ ಲಾಭ ಸಿಗುವಂತೆ ಮಾಡುವುದು ಗ್ಯಾರಂಟಿ ಅನುಷ್ಠಾನ ಸಮಿತಿಗಳ ಹೊಣೆ. ಯೋಜನೆಯ ಫಲ ಪೋಲು ತಪ್ಪಿಸಬೇಕಾದ ಹೊಣೆಯೂ ಸಮಿತಿಗಳ ಮೇಲಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ಗೃಹಲಕ್ಷ್ಮೀ ಮತ್ತಿತರ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ 1,44, 056 ಮಂದಿ ಮೃತಪಟ್ಟ ಬಳಿಕವೂ ಅವರ ಖಾತೆಗೆ ಸುಮಾರು ₹ 68 ಲಕ್ಷ ಜಮೆ ಆಗಿದೆ’ ಎಂದು ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಇಲ್ಲಿ ತಿಳಿಸಿದರು. </p>.<p>ದಕ್ಷಿಣಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತ ಕಾರ್ಯಾಗಾರ, ಪ್ರಗತಿ ಪರಿಶೀಲನಾ ಸಭೆ ಹಾಗೂ ಮಾದಕನಶೆಮುಕ್ತ ಕರ್ನಾಟಕ ಅಭಿಯಾನವನ್ನು ಇಲ್ಲಿ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. </p>.<p>‘ನೇರ ನಗದು ಪಾವತಿ ವ್ಯವಸ್ಥೆ ಇರುವುದರಿಂದ ಫಲಾನುಭವಿಗಳು ಮೃತಪಟ್ಟ ಬಳಿಕವೂ ಅವರ ಖಾತೆಗೆ ಹಣ ಜಮೆ ಆಗಿದೆ. ಆ ಹಣ ಜನರದ್ದು. ಹಾಗಾಗಿ ಅದನ್ನು ಹಿಂಪಡೆಯಲು ಪ್ರಯತ್ನ ನಡೆದಿದೆ’ ಎಂದರು. </p>.<p>‘ಕಟ್ಟಕಡೆಯ ಫಲಾನುಭವಿಗೂ ಯೋಜನೆಗಳ ಲಾಭ ಸಿಗುವಂತೆ ಮಾಡುವುದು ಗ್ಯಾರಂಟಿ ಅನುಷ್ಠಾನ ಸಮಿತಿಗಳ ಹೊಣೆ. ಯೋಜನೆಯ ಫಲ ಪೋಲು ತಪ್ಪಿಸಬೇಕಾದ ಹೊಣೆಯೂ ಸಮಿತಿಗಳ ಮೇಲಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>