‘ಮೊದಲ ಪಟ್ಟಿಯಲ್ಲಿ ಕೆಲಸಕ್ಕೆ ಸೇರಿದವರಿಗೆ ಕಳೆದ ವರ್ಷದ ಅಕ್ಟೋಬರ್ ನಂತರದಿಂದ ಮತ್ತು ಎರಡನೇ ಪಟ್ಟಿಯಲ್ಲಿ ಇರುವವರಿಗೆ 6 ತಿಂಗಳಿಂದ ಗೌರವ ಧನ ಸಿಗಲಿಲ್ಲ. ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವಂತೆ ಆಗ್ರಹಿಸಿ ಶೀಘ್ರದಲ್ಲೇ ಮತ್ತೊಂದು ಹೋರಾಟ ನಡೆಸಲಾಗುವುದು. ಮೆರಿಟ್ ಪದ್ಧತಿ ಕೈಬಿಟ್ಟು ಅನುಭವದ ಆಧಾರದಲ್ಲಿ ನೇಮಕಾತಿ ಮಾಡಬೇಕು, ಸೇವೆಗೆ ಪ್ರಮಾಣ ಪತ್ರ ನೀಡಬೇಕು, ಸೇವಾ ಭದ್ರತೆ ಒದಗಿಸಬೇಕು, ಗೌರವ ಧನ ಹೆಚ್ಚಿಸಿ ಪ್ರತಿ ತಿಂಗಳು ಸಮರ್ಪಕವಾಗಿ ವಿತರಿಸಬೇಕು’ ಎಂದು ಅವರು ಆಗ್ರಹಿಸಿದರು.