ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ರೌಡಿಗೆ ಗುಂಡೇಟು

ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ
Last Updated 9 ಜುಲೈ 2019, 5:44 IST
ಅಕ್ಷರ ಗಾತ್ರ

ಮಂಗಳೂರು: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಭವಿತ್ ರಾಜ್‌ನ ಮೇಲೆ ಇಲ್ಲಿನ ಪೊಲೀಸರು ಮಂಗಳವಾರ ಗುಂಡು ಹಾರಿಸಿದ್ದಾರೆ.

ಎಂಟು ಪ್ರಕರಣಗಳಲ್ಲಿ ಆತ ಭಾಗಿಯಾಗಿದ್ದ. ಜೊತೆಗೆ ಇತ್ತೀಚೆಗೆನಗರದ ಕುಲಶೇಖರದ ಸಿಲ್ವರ್ ಗೇಟ್ ಬಳಿಅಕ್ರಮ ಗೋ ಸಾಗಣೆ ಮಾಡಲಾಗುತ್ತಿದೆ ಎಂಬಶಂಕೆ ಮೇಲೆ ವಾಹನಅಡ್ಡಗಟ್ಟಿ ಮೂವರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿಯೂ ಭವಿತ್‌ ಭಾಗಿಯಾಗಿದ್ದ ಎಂಬ ಮಾಹಿತಿ ಪೊಲೀಸರಿಗೆ ತಿಳಿದು ಬಂದಿದೆ.

ನಗರದ ಹೊರವಲಯದಲ್ಲಿ ಆತ ವಾಸ್ತವ್ಯ ಹೂಡಿರುವ ಬಗ್ಗೆ ಮಾಹಿತಿ ಆಧರಿಸಿಕಂಕನಾಡಿ ನಗರ ಠಾಣೆಯಇನ್ಸ್‌ಪೆಕ್ಟರ್ ಅಶೋಕ್ ಮತ್ತು ಸಿಬ್ಬಂದಿ ಬಂಧಿಸಲು ತೆರಳಿದ್ದರು.‌ಆಗಆರೋಪಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಲು ಯತ್ನಿಸಿದ. ಇನ್ಸ್‌ಪೆಕ್ಟರ್ ಸ್ವಯಂ ರಕ್ಷಣೆಗಾಗಿ ಆತನ‌ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ' ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಆರೋಪಿ ಮತ್ತು ಆತನ ಸಹಚರರು ಭಾನುವಾರ ನಸುಕಿನ ಜಾವ ಸಿಲ್ವರ್ ಗೇಟ್ ಬಳಿ ಮಾವಿನ ಹಣ್ಣು ಸಾಗಣೆ ವಾಹನ ತಡೆದು ಮೂವರ ಮೇಲೆ ಹಲ್ಲೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT