<p><strong>ಪುತ್ತೂರು:</strong> ತಾಲ್ಲೂಕಿನ ಉಪ್ಪಿನಂಗಡಿ ಗ್ರಾಮದ ಕದಿಕ್ಕಾರು ಬೀಡಿನ ಬಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೇರಿದ 1.6 ಎಕರೆ ಜಾಗದಲ್ಲಿ ಹಲವು ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಪರಿಶಿಷ್ಟ ಜಾತಿಗೆ ಸೇರಿರುವ 18 ಕುಟುಂಬಗಳಿಗೆ ವಾಸಸ್ಥಳವನ್ನು ಶ್ರೀ ಕ್ಷೇತ್ರದ ವತಿಯಿಂದ ದಾನ ರೂಪದಲ್ಲಿ ನೀಡಲಾಗಿದೆ. ಈ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಂಗಳವಾರ ಪುತ್ತೂರು ಉಪ ವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.</p>.<p>ಉಪ ನೋಂದಣಿ ಕಚೇರಿಯಲ್ಲಿ ಭೂ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ಕ್ಷೇತ್ರದ ಪರವಾಗಿ 18 ಕುಟುಂಬಗಳಿಗೆ ಹಕ್ಕುಪತ್ರ ಹಸ್ತಾಂತರಿಸಿದ ಡಿ. ಹರ್ಷೇಂದ್ರ ಕುಮಾರ್ ಮಾತನಾಡಿ, ‘ಉಳುವನೇ ಹೊಲದೊಡೆಯ’ ಕಾನೂನು ಜಾರಿಯ ಸಂದರ್ಭದಲ್ಲಿ ಧರ್ಮಸ್ಥಳ ಕ್ಷೇತ್ರಕ್ಕೆ ಸೇರಿದ 3,600 ಎಕರೆ ಜಮೀನನ್ನು ಗೇಣಿದಾರರಿಗೆ ನೀಡಲಾಗಿತ್ತು. ಆ ಕಾಲದಿಂದಲೇ ಕದಿಕ್ಕಾರು ಬೀಡಿನ ಜಾಗದಲ್ಲಿ ವಾಸವಾಗಿದ್ದ ಕುಟುಂಬಗಳು ಕ್ಷೇತ್ರದ ಮೇಲಿನ ಭಕ್ತಿಯಿಂದ ಅರ್ಜಿ ಹಾಕಿರಲಿಲ್ಲ. ಆ ಕುಟುಂಬಕ್ಕೆ ಕ್ಷೇತ್ರದ ವತಿಯಿಂದ ಹಕ್ಕುಪತ್ರ ಮಾಡಿ ದಾನ ರೂಪದಲ್ಲಿ ಜಮೀನು ನೀಡಲಾಗಿದೆ’ ಎಂದರು.</p>.<p>ಸುಳ್ಯ ತಾಲ್ಲೂಕಿನ ಮರ್ಕಂಜದಲ್ಲಿ 15 ಕುಟುಂಬಗಳು ಕ್ಷೇತ್ರದ ಅಧೀನದಲ್ಲಿರುವ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ವಾಸ್ತವ್ಯವಿದ್ದು, ಅವರಿಗೂ ದಾನ ರೂಪದಲ್ಲಿ ಹಕ್ಕುಪತ್ರ ನೀಡಲಾಗುವುದು ಎಂದು ಅವರು ಹೇಳಿದರು.</p>.<p>ಹಕ್ಕುಪತ್ರ ಪಡೆದುಕೊಂಡ ಕುಟುಂಬಗಳ ಪರವಾಗಿ ಮಾತನಾಡಿದ ಮಹಾಲಿಂಗ ಅವರು, ‘ಉದ್ಯಮಿ ಆಶೋಕ್ ರೈ ಕೋಡಿಂಬಾಡಿ ನೇತೃತ್ವದಲ್ಲಿ ಕ್ಷೇತ್ರವನ್ನು ಸಂಪರ್ಕಿಸಿ ಹಕ್ಕುಪತ್ರ ನೀಡುವ ಬಗ್ಗೆ ಪ್ರಸ್ತಾವಿಸಿದಕ್ಕೆ ಧರ್ಮಾಕಾರಿ ಹೆಗ್ಗಡೆ ಒಪ್ಪಿಗೆ ಸೂಚಿಸಿದ್ದರು’ ಎಂದರು.</p>.<p>ಧರ್ಮಸ್ಥಳ ಕ್ಷೇತ್ರದ ಕಂದಾಯ ವಿಭಾಗದ ಮುಖ್ಯಸ್ಥ ಶುಭಚಂದ್ರ ರಾಜ, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ತಹಶೀಲ್ದಾರ್ ರಮೇಶ್ ಬಾಬು, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ಜಿಲ್ಲೆ-2ರ ನಿರ್ದೇಶಕ ಪ್ರವೀಣ್ ಕುಮಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಆನಂದ ಇದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ತಾಲ್ಲೂಕಿನ ಉಪ್ಪಿನಂಗಡಿ ಗ್ರಾಮದ ಕದಿಕ್ಕಾರು ಬೀಡಿನ ಬಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೇರಿದ 1.6 ಎಕರೆ ಜಾಗದಲ್ಲಿ ಹಲವು ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಪರಿಶಿಷ್ಟ ಜಾತಿಗೆ ಸೇರಿರುವ 18 ಕುಟುಂಬಗಳಿಗೆ ವಾಸಸ್ಥಳವನ್ನು ಶ್ರೀ ಕ್ಷೇತ್ರದ ವತಿಯಿಂದ ದಾನ ರೂಪದಲ್ಲಿ ನೀಡಲಾಗಿದೆ. ಈ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಂಗಳವಾರ ಪುತ್ತೂರು ಉಪ ವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.</p>.<p>ಉಪ ನೋಂದಣಿ ಕಚೇರಿಯಲ್ಲಿ ಭೂ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ಕ್ಷೇತ್ರದ ಪರವಾಗಿ 18 ಕುಟುಂಬಗಳಿಗೆ ಹಕ್ಕುಪತ್ರ ಹಸ್ತಾಂತರಿಸಿದ ಡಿ. ಹರ್ಷೇಂದ್ರ ಕುಮಾರ್ ಮಾತನಾಡಿ, ‘ಉಳುವನೇ ಹೊಲದೊಡೆಯ’ ಕಾನೂನು ಜಾರಿಯ ಸಂದರ್ಭದಲ್ಲಿ ಧರ್ಮಸ್ಥಳ ಕ್ಷೇತ್ರಕ್ಕೆ ಸೇರಿದ 3,600 ಎಕರೆ ಜಮೀನನ್ನು ಗೇಣಿದಾರರಿಗೆ ನೀಡಲಾಗಿತ್ತು. ಆ ಕಾಲದಿಂದಲೇ ಕದಿಕ್ಕಾರು ಬೀಡಿನ ಜಾಗದಲ್ಲಿ ವಾಸವಾಗಿದ್ದ ಕುಟುಂಬಗಳು ಕ್ಷೇತ್ರದ ಮೇಲಿನ ಭಕ್ತಿಯಿಂದ ಅರ್ಜಿ ಹಾಕಿರಲಿಲ್ಲ. ಆ ಕುಟುಂಬಕ್ಕೆ ಕ್ಷೇತ್ರದ ವತಿಯಿಂದ ಹಕ್ಕುಪತ್ರ ಮಾಡಿ ದಾನ ರೂಪದಲ್ಲಿ ಜಮೀನು ನೀಡಲಾಗಿದೆ’ ಎಂದರು.</p>.<p>ಸುಳ್ಯ ತಾಲ್ಲೂಕಿನ ಮರ್ಕಂಜದಲ್ಲಿ 15 ಕುಟುಂಬಗಳು ಕ್ಷೇತ್ರದ ಅಧೀನದಲ್ಲಿರುವ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ವಾಸ್ತವ್ಯವಿದ್ದು, ಅವರಿಗೂ ದಾನ ರೂಪದಲ್ಲಿ ಹಕ್ಕುಪತ್ರ ನೀಡಲಾಗುವುದು ಎಂದು ಅವರು ಹೇಳಿದರು.</p>.<p>ಹಕ್ಕುಪತ್ರ ಪಡೆದುಕೊಂಡ ಕುಟುಂಬಗಳ ಪರವಾಗಿ ಮಾತನಾಡಿದ ಮಹಾಲಿಂಗ ಅವರು, ‘ಉದ್ಯಮಿ ಆಶೋಕ್ ರೈ ಕೋಡಿಂಬಾಡಿ ನೇತೃತ್ವದಲ್ಲಿ ಕ್ಷೇತ್ರವನ್ನು ಸಂಪರ್ಕಿಸಿ ಹಕ್ಕುಪತ್ರ ನೀಡುವ ಬಗ್ಗೆ ಪ್ರಸ್ತಾವಿಸಿದಕ್ಕೆ ಧರ್ಮಾಕಾರಿ ಹೆಗ್ಗಡೆ ಒಪ್ಪಿಗೆ ಸೂಚಿಸಿದ್ದರು’ ಎಂದರು.</p>.<p>ಧರ್ಮಸ್ಥಳ ಕ್ಷೇತ್ರದ ಕಂದಾಯ ವಿಭಾಗದ ಮುಖ್ಯಸ್ಥ ಶುಭಚಂದ್ರ ರಾಜ, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ತಹಶೀಲ್ದಾರ್ ರಮೇಶ್ ಬಾಬು, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ಜಿಲ್ಲೆ-2ರ ನಿರ್ದೇಶಕ ಪ್ರವೀಣ್ ಕುಮಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಆನಂದ ಇದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>