ಇಳಂತಿಲ ಗ್ರಾಮದ ಮಹಿಳೆ ದೂರು ನೀಡಿದ್ದು, ‘ಏಪ್ರಿಲ್ 14ರಂದು ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಗೆರೆಟೆ ಸಂಗ್ರಹಿಸಲು ಹೋಗಿದ್ದ ವೇಳೆ ಸಮೀಪದ ನಿವಾಸಿ ಸೇನಾ ನಿವೃತ್ತ ಉದ್ಯೋಗಿ ಜಯ ಪೂಜಾರಿ ಎಂಬುವರು ತೋಟಕ್ಕೆ ಅಕ್ರಮ ಪ್ರವೇಶ ಮಾಡಿ, ನಿರಂತರ ಕೆಲ್ಲೆಸೆದು ಕಣ್ಣಿಗೆ ಗಾಯಗೊಳಿಸಿದ್ದಾರೆ. ಸುದೀರ್ಘ ಚಿಕಿತ್ಸೆಯ ಬಳಿಕವೂ ದೃಷ್ಟಿ ಬಂದಿಲ್ಲ. ಆರೋಪಿ ಮದ್ಯವ್ಯಸನಿಯಾಗಿದ್ದು, ರಾತ್ರಿ ವೇಳೆ ಮನೆಗೆ ಬಂದು ಟಾರ್ಚ್ ಲೈಟ್ ಹಾಕುವುದು, ಅವ್ಯಾಚ ಪದಗಳಿಂದ ಬೈಯುವುದು ಮೊದಲಾದ ಕಿರುಕುಳ ನೀಡುತ್ತಿದ್ದಾರೆ. ಕಿರುಕುಳ ನೀಡುವ ಕೃತ್ಯವನ್ನು ವಿಡಿಯೊ ಮೂಲಕ ದಾಖಲಿಸಿ ಸ್ಥಳೀಯ ಠಾಣೆಗೆ ದೂರು ನೀಡಿದ್ದರೂ ನ್ಯಾಯ ದೊರೆಯಲಿಲ್ಲ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.