<p><strong>ಮಂಗಳೂರು: </strong>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯ ಅಧೀನದಲ್ಲಿ ಬರುವ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ರತ್ನಾಕರ್, ಕಚೇರಿಯ ವೇಳೆಯಲ್ಲೇ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದು, ತನ್ನ ಚೇಷ್ಟೆಗಳಿಗೆ ಸಹಕರಿಸದ ಸಿಬ್ಬಂದಿಗೆ ಮಾನಸಿಕ ಚಿತ್ರಹಿಂಸೆ ನೀಡುವ ಆರೋಪ ಕೇಳಿಬಂದಿದೆ.<br /><br />ಆರೋಗ್ಯ ಇಲಾಖೆಯು ಈಗಾಗಲೇ ಡಾ.ರತ್ನಾಕರ್ ಅವರನ್ನು ಅಮಾನತು ಮಾಡಿದ್ದು, ಇಲಾಖಾ ವಿಚಾರಣೆ ಆರಂಭಿಸಿದೆ.<br />ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕಚೇರಿಯಲ್ಲಿ 9 ಮಹಿಳಾ ಸಿಬ್ಬಂದಿಗಳಿದ್ದು ಅವರೊಂದಿಗೆ ನಿತ್ಯ ಅಸಭ್ಯ ವರ್ತನೆ ಮಾಡುತ್ತಿದ್ದರು ಎನ್ನುವ ಆರೋಪಗಳು ಕೇಳಿಬಂದಿವೆ. ಡಾ.ರತ್ನಾಕರ್ ವೈದ್ಯಾಧಿಕಾರಿ ಮಾತ್ರವಲ್ಲದೆ ಆಯುಷ್ಮಾನ್ ನೋಡೆಲ್ ಆಫೀಸರ್ ಕೂಡ ಆಗಿದ್ದಾರೆ.<br /><br />ಮಹಿಳಾ ಸಿಬ್ಬಂದಿಯನ್ನು ಕರೆದುಕೊಂಡು ಟ್ರಿಪ್ ಹೋಗುತ್ತಿದ್ದ ಡಾ.ರತ್ನಾಕರ್, ತನ್ನ ಚೆಲ್ಲಾಟಕ್ಕೆ ಸಹಕರಿಸದ ಸಿಬ್ಬಂದಿಗೆ ಟಾರ್ಚರ್ ನೀಡುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ ವೈದ್ಯನ ಕುಚೇಷ್ಟೆ ಹೊರಬರುತ್ತಿದ್ದಂತೆ ಹಿರಿಯ ಅಧಿಕಾರಿಗಳು ಸೇವೆಯಿಂದ ಅಮಾನತುಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯ ಅಧೀನದಲ್ಲಿ ಬರುವ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ರತ್ನಾಕರ್, ಕಚೇರಿಯ ವೇಳೆಯಲ್ಲೇ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದು, ತನ್ನ ಚೇಷ್ಟೆಗಳಿಗೆ ಸಹಕರಿಸದ ಸಿಬ್ಬಂದಿಗೆ ಮಾನಸಿಕ ಚಿತ್ರಹಿಂಸೆ ನೀಡುವ ಆರೋಪ ಕೇಳಿಬಂದಿದೆ.<br /><br />ಆರೋಗ್ಯ ಇಲಾಖೆಯು ಈಗಾಗಲೇ ಡಾ.ರತ್ನಾಕರ್ ಅವರನ್ನು ಅಮಾನತು ಮಾಡಿದ್ದು, ಇಲಾಖಾ ವಿಚಾರಣೆ ಆರಂಭಿಸಿದೆ.<br />ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕಚೇರಿಯಲ್ಲಿ 9 ಮಹಿಳಾ ಸಿಬ್ಬಂದಿಗಳಿದ್ದು ಅವರೊಂದಿಗೆ ನಿತ್ಯ ಅಸಭ್ಯ ವರ್ತನೆ ಮಾಡುತ್ತಿದ್ದರು ಎನ್ನುವ ಆರೋಪಗಳು ಕೇಳಿಬಂದಿವೆ. ಡಾ.ರತ್ನಾಕರ್ ವೈದ್ಯಾಧಿಕಾರಿ ಮಾತ್ರವಲ್ಲದೆ ಆಯುಷ್ಮಾನ್ ನೋಡೆಲ್ ಆಫೀಸರ್ ಕೂಡ ಆಗಿದ್ದಾರೆ.<br /><br />ಮಹಿಳಾ ಸಿಬ್ಬಂದಿಯನ್ನು ಕರೆದುಕೊಂಡು ಟ್ರಿಪ್ ಹೋಗುತ್ತಿದ್ದ ಡಾ.ರತ್ನಾಕರ್, ತನ್ನ ಚೆಲ್ಲಾಟಕ್ಕೆ ಸಹಕರಿಸದ ಸಿಬ್ಬಂದಿಗೆ ಟಾರ್ಚರ್ ನೀಡುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ ವೈದ್ಯನ ಕುಚೇಷ್ಟೆ ಹೊರಬರುತ್ತಿದ್ದಂತೆ ಹಿರಿಯ ಅಧಿಕಾರಿಗಳು ಸೇವೆಯಿಂದ ಅಮಾನತುಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>