ಹೆಬ್ರಿ: ಮುನಿಯಾಲು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಹೃದಯ ರೋಗ, ಕಿವಿ, ಮೂಗು, ಗಂಟಲು, ಕಣ್ಣಿನ ತಪಾಸಣಾ ಶಿಬಿರ ನಡೆಯಿತು.
ಕಾರ್ಕಳ ರೋಟರಿ ಕ್ಲಬ್ ರಾಕ್ಸಿಟಿ, ಡಾ.ಟಿ.ಎಂ.ಎ ಪೈ ರೋಟರಿ ಕಣ್ಣಿನ ಆಸ್ಪತ್ರೆ ಆಶ್ರಯದಲ್ಲಿ ಮುನಿಯಾಲು ಲಯನ್ಸ್ ಕ್ಲಬ್, ಕಾರ್ಕಳ ನೆಕ್ಲಾಜೆ ವಿಶ್ವಕರ್ಮ ಮಹಿಳಾ ಮಂಡಳಿ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ಡಾ.ಭರತೇಶ್ ಕಾರ್ಕಳ ಆರೋಗ್ಯ ಸಲಹೆ ನೀಡಿದರು.
ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷ ಪ್ರಶಾಂತ್ ಬೆಳಿರಾಯ, ಪ್ರಾಥಮಿಕ ಆರೋಗ್ಯ ಕೇಂದ್ರ ಮುನಿಯಾಲಿನ ಮುಖ್ಯಸ್ಥೆ ಡಾ. ಸೌಮ್ಯಾ, ನೇತ್ರ ತಜ್ಞರಾದ ಡಾ. ಗೋಪಿಕಾ, ಡಾ. ತೇಜಸ್ವಿ ಕೆಎಂಸಿ ಮಣಿಪಾಲ, ಕಾರ್ಕಳ ವಿಶ್ವಕರ್ಮ ಮಹಿಳಾ ಮಂಡಳಿಯ ಅಧ್ಯಕ್ಷೆ ಜ್ಯೋತಿ ರವಿ, ಮುನಿಯಾಲು ಲಯನ್ಸ್ ಕ್ಲಬ್ ಅಧ್ಯಕ್ಷ ಕಾಡುಹೊಳೆ ಟಿ.ಮಂಜುನಾಥ್, ಮುನಿಯಾಲು ಗೋಪಿನಾಥ ಭಟ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.