<p><strong>ಮಂಗಳೂರು:</strong> ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಹಾಗೂ ಇತಿಹಾಸ ಪ್ರಾಧ್ಯಾಪಕರಾಗಿದ್ದ ಪ್ರೊ. ಬಿ.ಸುರೇಂದ್ರ ರಾವ್ ಅವರು ತುಳುವಿನಿಂದ ಇಂಗ್ಲಿಷ್ಗೆ ಅನುವಾದಿಸಿದ ‘ಹಾರ್ಟ್ಬೀಟ್ಸ್–ತುಳು ಸ್ಟೋರೀಸ್’ (ತುಳು ಕತೆಗಳ ಅನುವಾದ ಸಂಪುಟ)ವು ಮಾ.10ರಂದು ಬೆಳಿಗ್ಗೆ 10ಕ್ಕೆ ಬಿಡುಗಡೆಗೊಳ್ಳಲಿದೆ.</p>.<p>ಮಂಗಳೂರು ವಿಶ್ವವಿದ್ಯಾಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಸಭಾಂಗಣದಲ್ಲಿ ವಿಶ್ರಾಂತ ಕುಲಪತಿ ಪ್ರೊ.ಬಿ.ಎ. ವಿವೇಕ ರೈ ಕೃತಿ ಬಿಡುಗಡೆ ಮಾಡುವರು.</p>.<p>ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸುವರು. ರೋಶನಿ ನಿಲಯದ ವಿಶ್ರಾಂತ ಕುಲಸಚಿವ ಡಾ. ಲಕ್ಷ್ಮೀನಾರಾಯಣ ಭಟ್ ಪಿ., ಕುಲಸಚಿವ ರಾಜುಮೊಗವೀರ, ಪ್ರಸಾರಾಂಗ ನಿರ್ದೇಶಕ ಪ್ರೊ.ಕೆ.ಅಭಯಕುಮಾರ್ ಪಾಲ್ಗೊಳ್ಳುವರು.</p>.<p>ಈ ಕೃತಿಯಲ್ಲಿ ತುಳು ಸಂಸ್ಕೃತಿಗೆ ಸಂಬಂಧಿಸಿದ ಜನಪ್ರಿಯ ಹಾಗೂ ಮೌಲಿಕ ಕತೆಗಳು ಇಂಗ್ಲಿಷ್ಗೆ ಅನುವಾದಗೊಂಡಿದ್ದು, ತುಳು ಭಾಷೆಯಲ್ಲಿ ಮಹತ್ತರ ಘಟ್ಟವಾಗಿದೆ. ಅನುವಾದಕ ಪ್ರೊ.ಬಿ. ಸುರೇಂದ್ರರಾವ್ ಈಚೆಗೆ ನಿಧನ ಹೊಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಹಾಗೂ ಇತಿಹಾಸ ಪ್ರಾಧ್ಯಾಪಕರಾಗಿದ್ದ ಪ್ರೊ. ಬಿ.ಸುರೇಂದ್ರ ರಾವ್ ಅವರು ತುಳುವಿನಿಂದ ಇಂಗ್ಲಿಷ್ಗೆ ಅನುವಾದಿಸಿದ ‘ಹಾರ್ಟ್ಬೀಟ್ಸ್–ತುಳು ಸ್ಟೋರೀಸ್’ (ತುಳು ಕತೆಗಳ ಅನುವಾದ ಸಂಪುಟ)ವು ಮಾ.10ರಂದು ಬೆಳಿಗ್ಗೆ 10ಕ್ಕೆ ಬಿಡುಗಡೆಗೊಳ್ಳಲಿದೆ.</p>.<p>ಮಂಗಳೂರು ವಿಶ್ವವಿದ್ಯಾಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಸಭಾಂಗಣದಲ್ಲಿ ವಿಶ್ರಾಂತ ಕುಲಪತಿ ಪ್ರೊ.ಬಿ.ಎ. ವಿವೇಕ ರೈ ಕೃತಿ ಬಿಡುಗಡೆ ಮಾಡುವರು.</p>.<p>ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸುವರು. ರೋಶನಿ ನಿಲಯದ ವಿಶ್ರಾಂತ ಕುಲಸಚಿವ ಡಾ. ಲಕ್ಷ್ಮೀನಾರಾಯಣ ಭಟ್ ಪಿ., ಕುಲಸಚಿವ ರಾಜುಮೊಗವೀರ, ಪ್ರಸಾರಾಂಗ ನಿರ್ದೇಶಕ ಪ್ರೊ.ಕೆ.ಅಭಯಕುಮಾರ್ ಪಾಲ್ಗೊಳ್ಳುವರು.</p>.<p>ಈ ಕೃತಿಯಲ್ಲಿ ತುಳು ಸಂಸ್ಕೃತಿಗೆ ಸಂಬಂಧಿಸಿದ ಜನಪ್ರಿಯ ಹಾಗೂ ಮೌಲಿಕ ಕತೆಗಳು ಇಂಗ್ಲಿಷ್ಗೆ ಅನುವಾದಗೊಂಡಿದ್ದು, ತುಳು ಭಾಷೆಯಲ್ಲಿ ಮಹತ್ತರ ಘಟ್ಟವಾಗಿದೆ. ಅನುವಾದಕ ಪ್ರೊ.ಬಿ. ಸುರೇಂದ್ರರಾವ್ ಈಚೆಗೆ ನಿಧನ ಹೊಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>