‘ಕಾಲೇಜುಗಳ ಪ್ರಾಂಶುಪಾಲರ ಜೊತೆ ಸೋಮವಾರ ವಿಡಿಯೊ ಸಂವಾದ ನಡೆಸಿದ್ದು, ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಒಂದೇ ತೆರನಾದ ವೇಳಾಪಟ್ಟಿಯನ್ನು ನಿಗದಿಪಡಿಸಿಲ್ಲ. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಕಾಲೇಜುಗಳು ಕಾರ್ಯನಿರ್ವಹಿಸುವ ಅವಧಿ ಬೇಗ ಕೊನೆಗೊಳ್ಳಬೇಕು ಎಂದು ಸೂಚಿಸಿದ್ದೇವೆ. ಈ ಕುರಿತ ಸುತ್ತೋಲೆಯನ್ನು ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ 37 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಹಾಗೂ 39 ಅನುದಾನಿತ ಕಾಲೇಜುಗಳಿಗೆ ಕಳುಹಿಸಿದ್ದೇವೆ’ ಎಂದು ಕಾಲೇಜು ಶಿಕ್ಷಣ ನಿರ್ದೇಶನಾಲಯದ ಮಂಗಳೂರು ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ರಾಮೇಗೌಡ ಪ್ರತಿಕ್ರಿಯಿಸಿದ್ದಾರೆ.