ತಾಲ್ಲೂಕಿನಲ್ಲಿ ಸುಮಾರು ಒಂದು ಗಂಟೆ ಧಾರಾಕಾರ ಮಳೆ ಆಗಿದೆ. ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ರಸ್ತೆ ಅಗೆದಿರುವ, ಮಣ್ಣು ತುಂಬಿರುವ ಕಡೆ ಮಳೆ ನೀರು ಸಂಗ್ರಹವಾಗಿ ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಕಾಮಗಾರಿ ಕಾರಣ ಚರಂಡಿ ಮುಚ್ಚಿದ್ದು, ಮಳೆ ನೀರು ರಸ್ತೆಯ ಮೇಲೆ ಹರಿಯಿತು. ರಸ್ತೆಯಿಂದ ಕೆಳಗಿಳಿದ ಕೆಲವು ವಾಹನಗಳು ಕೆಸರಿನಲ್ಲಿ ಹೂತು ಹೋದವು.