ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲ್ಲಮೊಗ್ರು; ಮತ್ತೆ ಬಿರುಸು ಪಡೆದ ಮಳೆ

Last Updated 3 ಆಗಸ್ಟ್ 2022, 21:03 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಧಾರಾಕಾರ ಮಳೆಯಿಂದ ತತ್ತರಿಸಿರುವ ಕೊಲ್ಲಮೊಗ್ರು, ಕಲ್ಮಕಾರು ಭಾಗದಲ್ಲಿ ಬುಧವಾರ ಸಂಜೆ ಮತ್ತೆ ಮಳೆ ಬಿರುಸಾಗಿದೆ.

ಕೊಲ್ಲಮೊಗ್ರು ಪೇಟೆಯ ರಸ್ತೆಗಳು ಮತ್ತೆ ಜಲಾವೃತ ಗೊಂಡಿವೆ. ಹರಿಹರ ಪಲ್ಲತ್ತಡ್ಕ- ಬಾಳುಗೋಡು ಸೇತುವೆ ಮುಳುಗಡೆಯಾಗಿದೆ. ಸುಳ್ಯ ತಾಲ್ಲೂಕಿನಾದ್ಯಂತ ಬುಧವಾರ ಸಂಜೆ ಬಳಿಕ ಮಳೆ ಬಿರುಸು ಪಡೆಯಿತು. ಬುಧವಾರ ಬೆಳಗಿನ ವೇಳೆ ಮಳೆ ಕೊಂಚ ತಗ್ಗಿತ್ತು.

ಮಳೆಯ ಹಿನ್ನೆಲೆಯಲ್ಲಿ ಸುಳ್ಯ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ಆ.4ರಂದು ರಜೆ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT