ಎನ್ಡಿಆರ್ ಎಫ್ ತಂಡ ಈಗಾಗಲೇ ಸುಬ್ರಹ್ಮಣ್ಯದಲ್ಲಿದ್ದು ತುರ್ತು ಪರಿಹಾರ ಕಾರ್ಯವನ್ನು ನಿರ್ವಹಿಸುತ್ತಿದೆ ಹಾಗೆ ಎಸ್ ಡಿ ಆರ್. ಎಫ್ ತಂಡ ಕೊಲ್ಲಮೊಗರು ಭಾಗಕ್ಕೆ ಭೇಟಿ ನೀಡಿದೆ. ನಂತರ ಸುಬ್ರಹ್ಮಣ್ಯದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕಳುಹಿಸಲಾಗಿದೆ. ಸುಳ್ಯ ಮತ್ತು ಪುತ್ತೂರಿನ ಅಗ್ನಿಶಾಮಕ ತಂಡಗಳು ರಾತ್ರಿಯಿಂದ ಕೊಲ್ಲಮೊಗರು ಹಾಗೂ ಸುಳ್ಯ ಸುಬ್ರಹ್ಮಣ್ಯದ ಪ್ರದೇಶಗಳಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಕಾರ್ಯವನ್ನ ನಿರ್ವಹಿಸುತ್ತಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಞಮೂರ್ತಿ ಅವರು ಮಾಹಿತಿ ನೀಡಿದ್ದಾರೆ.