<p><strong>ಮಂಗಳೂರು</strong>: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಆರುದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಗುರುವಾರ ರೆಡ್ ಅಲರ್ಟ್ ಹಾಗೂ ಮುಂದಿನ ಐದು ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. </p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮತ್ತು ಬುಧವಾರ ಸುರಿದ ಮಳೆಗೆ ಎರಡು ಮಂಗಲೂರು ಮತ್ತು ಬಂಟ್ವಾಳ ತಾಲ್ಲೂಕಿನಲ್ಲಿ ತಲಾ ಒಂದು ಮನೆ ಸಂಪೂರ್ಣ ಹಾಗೂ ಮಂಗಳೂರು ತಾಲ್ಲೂಕಿನಲ್ಲಿ 3 ಮನೆಗಳು ಭಾಗಶಃ ಹಾನಿಗೊಳಗಾಗಿವೆ. 60 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಒಂದು ವಿದ್ಯುತ್ ಪರಿವರ್ತಕ ಕೆಟ್ಟುಹೋಗಿದೆ. ತುರ್ತಉ ಸ್ಪಂದನೆಗಾಗಿ ಎಸ್ಡಿಆರ್ಎಫ್ನ 25 ತಂಡಗಳು ಹಾಗೂ 26ದೋಣಿಗಳು ಸನ್ನದ್ಧವಾಗಿವೆ. </p>.<p class="Subhead">ಜಲಾಶಯಗಳು ಭರ್ತಿ: ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 6.18 ಸೆಂ.ಮೀ ಮಳೆ ದಾಖಲಾಗಿದೆ. ಜಿಲ್ಲೆಯಲ್ಲಿ ನೇತ್ರಾವತಿ ನದಿಗೆ ಕಟ್ಟಿರುವ ಅಣೆಕಟ್ಟುಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬಂದಿದೆ. ಎಎಂಆರ್, ತುಂಬೆ, ಬಿಳಿಯೂರು ಜಲಾಶಯಗಳು ಭರ್ತಿಯಾಗಿವೆ. 2 ಮೀ ಎತ್ತರದವರೆಗೆ ನೀರು ಸಂಗ್ರಹಿಸುವ ಸಾಮರ್ಥ್ಯವಿರುವ ಹರೇಕಳ ಅಡ್ಯಾರ್ ಅಣೆಕಟ್ಟೆಯ ಜಲಾಶಯದಲ್ಲಿ 1 ಮೀ ಎತ್ತರದರವರೆಗೆ ನೀರು ಸಂಗ್ರಹವಿದೆ. 5.5 ಮೀವರೆಗೆ ನೀರು ಸಂಗ್ರಹ ಸಾಮರ್ಥ್ಯವಿರುವ ಜಕ್ರಿಬೆಟ್ಟು ಅಣೆಕಟ್ಟೆಯ ಜಲಾಶಯದಲ್ಲಿ 3.50 ಮೀ.ವರೆಗೆ ನೀರು ಸಂಗ್ರಹವಿದೆ. </p>.<p class="Subhead">ಫಲ್ಗುಣಿ ನದಿಯ ಅಣೆಕಟ್ಟ್ಟೆಗಳಲ್ಲಿ 2.5 ಮೀ ವರೆಗೆ ನೀರು ಸಂಗ್ರಹ ಸಾಮರ್ಥ್ಯವಿರುವ ಮಳವೂರು ಜಲಾಶಯದಲ್ಲಿ 2 ಮೀ ಎತ್ತರದವರೆಗೆ ನೀರು ಸಂಗ್ರಹವಿದೆ. 4.5 ಮೀ ಎತ್ತರದವರೆಗೆ ನೀರು ಸಂಗ್ರಹ ಸಾಮರ್ಥ್ಯವಿರುವ ಇರುವೈಲು ಅಣೆಕಟ್ಟೆಯ ಜಲಾಶಯದಲ್ಲಿ 0.2 ಮೀ ಎತ್ತರದವರೆಗೆ ನೀರು ಸಂಗ್ರಹವಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಆರುದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಗುರುವಾರ ರೆಡ್ ಅಲರ್ಟ್ ಹಾಗೂ ಮುಂದಿನ ಐದು ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. </p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮತ್ತು ಬುಧವಾರ ಸುರಿದ ಮಳೆಗೆ ಎರಡು ಮಂಗಲೂರು ಮತ್ತು ಬಂಟ್ವಾಳ ತಾಲ್ಲೂಕಿನಲ್ಲಿ ತಲಾ ಒಂದು ಮನೆ ಸಂಪೂರ್ಣ ಹಾಗೂ ಮಂಗಳೂರು ತಾಲ್ಲೂಕಿನಲ್ಲಿ 3 ಮನೆಗಳು ಭಾಗಶಃ ಹಾನಿಗೊಳಗಾಗಿವೆ. 60 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಒಂದು ವಿದ್ಯುತ್ ಪರಿವರ್ತಕ ಕೆಟ್ಟುಹೋಗಿದೆ. ತುರ್ತಉ ಸ್ಪಂದನೆಗಾಗಿ ಎಸ್ಡಿಆರ್ಎಫ್ನ 25 ತಂಡಗಳು ಹಾಗೂ 26ದೋಣಿಗಳು ಸನ್ನದ್ಧವಾಗಿವೆ. </p>.<p class="Subhead">ಜಲಾಶಯಗಳು ಭರ್ತಿ: ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 6.18 ಸೆಂ.ಮೀ ಮಳೆ ದಾಖಲಾಗಿದೆ. ಜಿಲ್ಲೆಯಲ್ಲಿ ನೇತ್ರಾವತಿ ನದಿಗೆ ಕಟ್ಟಿರುವ ಅಣೆಕಟ್ಟುಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬಂದಿದೆ. ಎಎಂಆರ್, ತುಂಬೆ, ಬಿಳಿಯೂರು ಜಲಾಶಯಗಳು ಭರ್ತಿಯಾಗಿವೆ. 2 ಮೀ ಎತ್ತರದವರೆಗೆ ನೀರು ಸಂಗ್ರಹಿಸುವ ಸಾಮರ್ಥ್ಯವಿರುವ ಹರೇಕಳ ಅಡ್ಯಾರ್ ಅಣೆಕಟ್ಟೆಯ ಜಲಾಶಯದಲ್ಲಿ 1 ಮೀ ಎತ್ತರದರವರೆಗೆ ನೀರು ಸಂಗ್ರಹವಿದೆ. 5.5 ಮೀವರೆಗೆ ನೀರು ಸಂಗ್ರಹ ಸಾಮರ್ಥ್ಯವಿರುವ ಜಕ್ರಿಬೆಟ್ಟು ಅಣೆಕಟ್ಟೆಯ ಜಲಾಶಯದಲ್ಲಿ 3.50 ಮೀ.ವರೆಗೆ ನೀರು ಸಂಗ್ರಹವಿದೆ. </p>.<p class="Subhead">ಫಲ್ಗುಣಿ ನದಿಯ ಅಣೆಕಟ್ಟ್ಟೆಗಳಲ್ಲಿ 2.5 ಮೀ ವರೆಗೆ ನೀರು ಸಂಗ್ರಹ ಸಾಮರ್ಥ್ಯವಿರುವ ಮಳವೂರು ಜಲಾಶಯದಲ್ಲಿ 2 ಮೀ ಎತ್ತರದವರೆಗೆ ನೀರು ಸಂಗ್ರಹವಿದೆ. 4.5 ಮೀ ಎತ್ತರದವರೆಗೆ ನೀರು ಸಂಗ್ರಹ ಸಾಮರ್ಥ್ಯವಿರುವ ಇರುವೈಲು ಅಣೆಕಟ್ಟೆಯ ಜಲಾಶಯದಲ್ಲಿ 0.2 ಮೀ ಎತ್ತರದವರೆಗೆ ನೀರು ಸಂಗ್ರಹವಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>