ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕಾಗಿದ್ದು, ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಗರವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆಯಿಂದ ಮನೆಗಳಿಗೆ ಹಾನಿಯಾಗಿದೆ. ಬೊಂಡಂತಿಲ, ಜಾಲ್ಸೂರು, ಬಜ್ಪೆ ಗ್ರಾಮಗಳಲ್ಲಿ ಮನೆಗಳಿಗೆ ಹಾನಿಯಾಗಿದೆ.
ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ. ನೇತ್ರಾವತಿ, ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಆಗುತ್ತಿದೆ. ಕಡಲ ತೀರದಲ್ಲಿ ಅಲೆಗಳ ಅಬ್ಬರವೂ ಹೆಚ್ಚಾಗಿದೆ.
ಭಾರತೀಯ ಹವಾಮಾನ ಇಲಾಖೆಯು ಜುಲೈ 19 ಹಾಗೂ 20 ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಶುಕ್ರವಾರ ಹಾಗೂ ಶನಿವಾರ ಎಲ್ಲೋ ಅಲರ್ಟ್ ಘೋಷಿಲಾಗಿದೆ. ಗುರುವಾರದಿಂದಲ್ಲೇ ನಿರಂತರವಾಗಿ ಮಳೆ ಸುರಿಯುತ್ತಿದೆ.