ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ
ಮಂಗಳೂರು: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಂಗಳವಾರ ಸಂಜೆ ಗುಡುಗು–ಸಿಡಿಲು ಸಹಿತ ಮಳೆ ಸುರಿಯಿತು.
ಬಂಟ್ವಾಳ ಹಾಗೂ ಮಂಗಳೂರು ತಾಲ್ಲೂಕಿನಲ್ಲಿ ಸಂಜೆ ಗಾಳಿಯೊಂದಿಗೆ ಕೆಲ ಹೊತ್ತು ಮಳೆ ಸುರಿಯಿತು. ಪುತ್ತೂರು, ಸುಳ್ಯ, ಬೆಳ್ತಂಗಡಿಯ ವಿವಿಧೆಡೆ ತುಂತುರು ಮಳೆಯಾಗಿದೆ. ಬಿಸಿಲಿನ ಧಗೆಯಲ್ಲಿ ಬೆಂದಿದ್ದ ಕರಾವಳಿಯಲ್ಲಿ ಸಂಜೆಯ ಅಕಾಲಿಕ ಮಳೆಯು ತಂಪು ನೀಡಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.