ಪುತ್ತೂರು ಕುಂಜೂರುಪಂಜ-ಪಾಣಾಜೆ ರಸ್ತೆಯ ಚೆಲ್ಯಡ್ಕದಲ್ಲಿರುವ ಸೇತುವೆ ಶುಕ್ರವಾರ ರಾತ್ರಿಯಿಂದಲೇ ಸಂಪೂರ್ಣ ಜಲಾವೃತಗೊಂಡಿದ್ದು, ಈ ಭಾಗದ ಮಂದಿ ಸಂಚಾರಕ್ಕಾಗಿ ಪರ್ಯಾಯ ರಸ್ತೆಯನ್ನು ಬಳಸಬೇಕಾದ ಅನಿವಾರ್ಯತೆ ಬಂದಿದೆ. ಪುತ್ತೂರು -ಈಶ್ವರಮಂಗಲ-ಸುಳ್ಯಪದವು ರಸ್ತೆಯಲ್ಲಿ ಮೀನಾವು ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಬಾರೀ ಮಳೆಯಿಂದಾಗಿ ತಾಲ್ಲೂಕಿನಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ.