ಇಂದು ಸಾಂಕೇತಿಕ ಪ್ರತಿಭಟನೆ: ಸುರತ್ಕಲ್ ಟೋಲ್ಗೇಟ್ ಅನ್ನು ಹೆಜಮಾಡಿ ಟೋಲ್ನಲ್ಲಿ ವಿಲೀನಗೊಳಿಸಿ, ಅಲ್ಲಿ ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ, ಟೋಲ್ಗೇಟ್ ವಿರೋಧ ಹೋರಾಟ ಸಮಿತಿ ಹಾಗೂ ಸಮಾನ ಮನಸ್ಕರು ಡಿ.2ರಂದು ಹೆಜಮಾಡಿ ಟೋಲ್ ಬಳಿ ಸಾಂಕೇತಿಕ ಧರಣಿ ನಡೆಸಲಿದ್ದಾರೆ. ಶುಲ್ಕ ಹೆಚ್ಚಳ ಪ್ರಸ್ತಾವ ಕೈಬಿಡಬೇಕು. ಇಲ್ಲವಾದಲ್ಲಿ ಮತ್ತೆ ನಿರಂತರ ಧರಣಿ ನಡೆಸಲಾಗುತ್ತದೆ ಎಂದು ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.