<p><strong>ಮಂಗಳೂರು:</strong> ರಾಜ್ಯದ ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅಗತ್ಯವಾಗಿದ್ದು, ಅದಕ್ಕೆ ಪೂರಕವಾಗಿ ಮಂಗಳೂರಿನಲ್ಲಿ ಹೈಕೋರ್ಟ್ನ ಸಂಚಾರಿ ಪೀಠ ಸ್ಥಾಪನೆಗೆ ಕ್ರಮಕೈಗೊಳ್ಳಬೇಕು ಎಂದು ‘ಹೈಕೋರ್ಟ್ ಪೀಠ ಹೋರಾಟ ಸಮಿತಿ’ಯ ನಿಯೋಗ ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರಿಗೆ ಮನವಿ ಮಾಡಿತು.</p>.ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಆರಂಭಕ್ಕೆ ಒತ್ತಾಯ.<p>ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ನೇತೃತ್ವದ ನಿಯೋಗ, ಉಡುಪಿಯ ಪ್ರವಾಸಿ ಮಂದಿರದಲ್ಲಿ ಶನಿವಾರ ವಿಭು ಬಖ್ರು ಅವರನ್ನು ಭೇಟಿಯಾಯಿತು.</p><p>‘ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅಗತ್ಯವಾಗಿದೆ. ಈ ಭಾಗದ ಜನರು ದೂರದ ಬೆಂಗಳೂರಿಗೆ ಹೋಗಿ ಕಾನೂನು ಹೋರಾಟ ನಡೆಸಬೇಕಾಗಿದೆ. ಮಳೆಗಾಲದ ಸಂದರ್ಭದಲ್ಲಿ ಬೆಂಗಳೂರಿನ ಸಂಪರ್ಕ ಆಗಾಗ ಕಡಿತಗೊಳ್ಳುವುದರಿಂದ ಜನರು ಹೈಕೋರ್ಟಿಗೆ ಸಂಚರಿಸಲು ಕಷ್ಟ ಅನುಭವಿಸಬೇಕಾಗಿದೆ. ಅಲ್ಲದೆ ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ದಾವೆಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದ್ದು ಇದರಿಂದ ಈ ಭಾಗದ ಜನರಿಗೆ ತೊಂದರೆಯಾಗುತ್ತಿದೆ’ ಎಂದು ಮನವಿಯಲ್ಲಿ ವಿವರಿಸಲಾಗಿದೆ.</p>.ಬೆಳಗಾವಿ | ಸಂಚಾರಿ ಪೀಠ: ತ್ವರಿತ ವ್ಯಾಜ್ಯ ವಿಲೇವಾರಿಗೆ ಅನುಕೂಲ: KH ಮುನಿಯಪ್ಪ.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒಲವನ್ನು ತೋರಿದ್ದು, ಮೊದಲಿಗೆ ಸಂಚಾರಿ ಪೀಠ ಸ್ಥಾಪಸಲು ಒಪ್ಪಿಗೆ ನೀಡಬೇಕು ಎಂದು ವಿನಂತಿಸಲಾಯಿತು. ಮುಖ್ಯ ನ್ಯಾಯಮೂರ್ತಿ ಅವರು ಪೂರಕವಾಗಿ ಸ್ಪಂದಿಸಿದರು‘ ಎಂದು ಸಮಿತಿಯವರು ತಿಳಿಸಿದ್ದಾರೆ.</p><p>ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್. ವಿ., ಮಂಗಳೂರಿನ ಪ್ರಧಾನ ಜಿಲ್ಲಾ ಸರ್ಕಾರಿ ವಕೀಲ ಎಂ.ಪಿ. ನರೋನ್ಹ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್., ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ಉಪಾಧ್ಯಕ್ಷ ದೇವದಾಸ್ ವಿ. ಶೆಟ್ಟಿಗಾರ್, ಬ್ರಹ್ಮಾವರ ವಕೀಲರ ಸಂಘದ ಅಧ್ಯಕ್ಷ ಕಾಡೂರು ಪ್ರವೀಣ್ ಶೆಟ್ಟಿ ನಿಯೋಗದಲ್ಲಿದ್ದರು ಎಂದು ಪ್ರಕಟಣೆ ತಿಳಿಸಿದೆ.</p> .ಬೆಳಗಾವಿಗೆ ದಕ್ಕಿದ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಂಚಾರಿ ಪೀಠ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ರಾಜ್ಯದ ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅಗತ್ಯವಾಗಿದ್ದು, ಅದಕ್ಕೆ ಪೂರಕವಾಗಿ ಮಂಗಳೂರಿನಲ್ಲಿ ಹೈಕೋರ್ಟ್ನ ಸಂಚಾರಿ ಪೀಠ ಸ್ಥಾಪನೆಗೆ ಕ್ರಮಕೈಗೊಳ್ಳಬೇಕು ಎಂದು ‘ಹೈಕೋರ್ಟ್ ಪೀಠ ಹೋರಾಟ ಸಮಿತಿ’ಯ ನಿಯೋಗ ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರಿಗೆ ಮನವಿ ಮಾಡಿತು.</p>.ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಆರಂಭಕ್ಕೆ ಒತ್ತಾಯ.<p>ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ನೇತೃತ್ವದ ನಿಯೋಗ, ಉಡುಪಿಯ ಪ್ರವಾಸಿ ಮಂದಿರದಲ್ಲಿ ಶನಿವಾರ ವಿಭು ಬಖ್ರು ಅವರನ್ನು ಭೇಟಿಯಾಯಿತು.</p><p>‘ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅಗತ್ಯವಾಗಿದೆ. ಈ ಭಾಗದ ಜನರು ದೂರದ ಬೆಂಗಳೂರಿಗೆ ಹೋಗಿ ಕಾನೂನು ಹೋರಾಟ ನಡೆಸಬೇಕಾಗಿದೆ. ಮಳೆಗಾಲದ ಸಂದರ್ಭದಲ್ಲಿ ಬೆಂಗಳೂರಿನ ಸಂಪರ್ಕ ಆಗಾಗ ಕಡಿತಗೊಳ್ಳುವುದರಿಂದ ಜನರು ಹೈಕೋರ್ಟಿಗೆ ಸಂಚರಿಸಲು ಕಷ್ಟ ಅನುಭವಿಸಬೇಕಾಗಿದೆ. ಅಲ್ಲದೆ ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ದಾವೆಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದ್ದು ಇದರಿಂದ ಈ ಭಾಗದ ಜನರಿಗೆ ತೊಂದರೆಯಾಗುತ್ತಿದೆ’ ಎಂದು ಮನವಿಯಲ್ಲಿ ವಿವರಿಸಲಾಗಿದೆ.</p>.ಬೆಳಗಾವಿ | ಸಂಚಾರಿ ಪೀಠ: ತ್ವರಿತ ವ್ಯಾಜ್ಯ ವಿಲೇವಾರಿಗೆ ಅನುಕೂಲ: KH ಮುನಿಯಪ್ಪ.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒಲವನ್ನು ತೋರಿದ್ದು, ಮೊದಲಿಗೆ ಸಂಚಾರಿ ಪೀಠ ಸ್ಥಾಪಸಲು ಒಪ್ಪಿಗೆ ನೀಡಬೇಕು ಎಂದು ವಿನಂತಿಸಲಾಯಿತು. ಮುಖ್ಯ ನ್ಯಾಯಮೂರ್ತಿ ಅವರು ಪೂರಕವಾಗಿ ಸ್ಪಂದಿಸಿದರು‘ ಎಂದು ಸಮಿತಿಯವರು ತಿಳಿಸಿದ್ದಾರೆ.</p><p>ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್. ವಿ., ಮಂಗಳೂರಿನ ಪ್ರಧಾನ ಜಿಲ್ಲಾ ಸರ್ಕಾರಿ ವಕೀಲ ಎಂ.ಪಿ. ನರೋನ್ಹ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್., ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ಉಪಾಧ್ಯಕ್ಷ ದೇವದಾಸ್ ವಿ. ಶೆಟ್ಟಿಗಾರ್, ಬ್ರಹ್ಮಾವರ ವಕೀಲರ ಸಂಘದ ಅಧ್ಯಕ್ಷ ಕಾಡೂರು ಪ್ರವೀಣ್ ಶೆಟ್ಟಿ ನಿಯೋಗದಲ್ಲಿದ್ದರು ಎಂದು ಪ್ರಕಟಣೆ ತಿಳಿಸಿದೆ.</p> .ಬೆಳಗಾವಿಗೆ ದಕ್ಕಿದ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಂಚಾರಿ ಪೀಠ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>